Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ವಿನೋದ್ ಪ್ರಭಾಕರ್ ಕಣ್ಣಿಗೆ ಬಲವಾದ ಪೆಟ್ಟು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಮಂಗಳವಾರ (ಜು.31) ಈ ಘಟನೆ ನಡೆದಿದೆ. 'ಗಜೇಂದ್ರ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಡೆಯುತ್ತಿತ್ತು. ಆಗ ಅವರ ಎಡಗಣ್ಣಿನ ಹುಬ್ಬಿಗೆ ಬಲವಾದ ಪೆಟ್ಟುಬಿತ್ತು.
ಕೂಡಲೆ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಕಣ್ಣಿನ ಹುಬ್ಬಿನ ಭಾಗದಲ್ಲಿ ಮೂರು ಹೊಲಿಗೆಗಳನ್ನು ಹಾಕಲಾಗಿದ್ದು ಪ್ಲಾಸ್ಟಿಕ್ ಸರ್ಜರಿಯನ್ನೂ ಮಾಡಲಾಗಿದೆ. ಪೆಟ್ಟು ಬಿದ್ದ ರಭಸಕ್ಕೆ ಅವರ ಕಣ್ಣಿನ ಭಾಗ ಊದಿಕೊಂಡಿತ್ತು.
ಆದರೂ ಅವರು ಚಿತ್ರೀಕರಣಕ್ಕೆ ಬಂದಿದ್ದು ಚಿತ್ರತಂಡದ ಹುಬ್ಬೇರಿಸಿತ್ತು. ಒಂದು ವಾರ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ವಿನೋದ್ ಪ್ರಭಾಕರ್ ಅವರಿಗೆ ಸೂಚಿಸಿದ್ದಾರೆ. ಹಾಗಾಗಿ ಇಂದಿನ ಚಿತ್ರೀಕರಣಕ್ಕೆ ಪ್ಯಾಕಪ್ ಹೇಳಲಾಯಿತು.
'ಹೋರಿ' ಚಿತ್ರದ ಬಳಿಕ ಸಾಕಷ್ಟು ಗ್ಯಾಪ್ ತೆಗೆದುಕೊಂಡಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಜೆಜೆ ಕೃಷ್ಣ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ. ಸ್ಲಂ ಹುಡುಗನಾಗಿ ಬಳಿಕ ಎಂಎಲ್ ಎ ಆಗಿ ವಿನೋದ್ ಅವರದು ಈ ಚಿತ್ರದಲ್ಲಿ ದ್ವಿಪಾತ್ರಾಭಿನಯ. ಭ್ರಷ್ಟ ಪೊಲೀಸ್ ಅಧಿಕಾರಿಯಾಗಿ ಶೋಭರಾಜ್ ಅಭಿನಯಿಸುತ್ತಿದ್ದಾರೆ.
ಡೈಸಿ ಶಾ ಹಾಗೂ ಸ್ವಾತಿ ಚಿತ್ರದ ಇಬ್ಬರು ನಾಯಕಿಯರು. ರಾಜೇಶ್ ರಾಮನಾಥ್ ಅವರ ಸಂಗೀತವಿರುವ ಚಿತ್ರಕ್ಕೆ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಐಹೊಳೆ ಹಾಗೂ ಪಟ್ಟದಕಲ್ಲಿನ ಐತಿಹಾಸಿಕ ಪ್ರದೇಶಗಳಲ್ಲಿ ಹಾಡುಗಳನ್ನು ಚಿತ್ರೀಕರಿಸಲಾಗಿದೆ. (ಏಜೆನ್ಸೀಸ್)