Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟುಹಬ್ಬ ಆಚರಣೆ 'ನೋ' ಎಂದ ಪ್ರಭಾಕರ್ ಪುತ್ರ, ಕಾರಣ ಏನು?
Recommended Video
ನಟ ಪ್ರಭಾಕರ್ ಪುತ್ರ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ ಇಂದು ಇದೆ. ಆದರೆ, ಅವರು ಈ ವರ್ಷದ ತಮ್ಮ ಹುಟ್ಟಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಪ್ರತಿ ವರ್ಷ ಕೂಡ ಅಭಿಮಾನಿಗಳ ಜೊತೆಗೆ ಸೇರಿ ಸಂತೋಷ ಪಡುತ್ತಿದ್ದ ಅವರು ಈ ಬಾರಿ ಯಾವುದೇ ಕಾರ್ಯಕ್ರಮ ಮಾಡಿಕೊಳ್ಳದೇ ಇರಲು ನಿರ್ಧಾರ ಮಾಡಿದ್ದಾರೆ.
ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ತಮ್ಮ ಹುಟ್ಟುಹಬ್ಬ ಆಚರಣೆಗೆ ವಿನೋದ್ ಪ್ರಭಾಕರ್ ನೋ ಎಂದಿದ್ದಾರೆ. ಅಭಿಮಾನಿಗಳಿಗೆ ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡದಂತೆ ಮನವಿ ಮಾಡಿದ್ದಾರೆ.
ಅಂಬಿ ನಿಧನದ ಸುದ್ದಿ ಕೇಳಿ ಕಣ್ಣೀರಿಟ್ಟ 'ಬಿಗ್ ಬಾಸ್' ಸ್ಪರ್ಧಿಗಳು
''ಕಳೆದ ಬಾರಿ ಅನೇಕ ಸಂಖ್ಯೆಯ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಬಂದಿದ್ದರು. ಈ ಬಾರಿ ಕೇಕ್, ಹಾರ, ಪಟಾಕಿ ಯಾವುದು ಬೇಡ, ಹುಟ್ಟುಹಬ್ಬ ಆಚರಣೆ ಮಾಡುವ ಮನಸ್ಥಿತಿಯಲ್ಲಿ ನಾನು ಇಲ್ಲ. ವಿಶ್ ಮಾಡಿಬೇಕು ಎನ್ನುವವರು ಕೇಕ್ ಹಾರ ಯಾವುದು ಇಲ್ಲದೆ ಬಂದು ಶುಭಾಶಯ ತಿಳಿಸಿ ಎಂದು ಹೇಳಿದ್ದಾರೆ.
ಗಂಗಾನದಿಯಲ್ಲಿ ಅಂಬರೀಶ್ ಚಿತಾಭಸ್ಮ ವಿಸರ್ಜನೆ
ಈ ರೀತಿ ವಿನೋದ್ ಪ್ರಭಾಕರ್ ಅಗಲಿದ ನಾಯಕನಿಗೆ ತಮ್ಮ ಗೌರವ ಸೂಚಿಸಿದ್ದಾರೆ. ಸದ್ಯ, ವಿನೋದ್ ಪ್ರಭಾಕರ್ 'ರಗಡ್', 'ಫೈಟರ್' ಸೇರಿದಂತೆ ಕೆಲ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ .