Don't Miss!
- News 2024ರ ಲೋಸಕಭೆ ಚುನಾವಣೆಗೆ ಮತ ಹಾಕುವುದು ಹೇಗೆ?
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ವಿನೋದ್ ರಾಜ್ ಸಹಾಯ ಮಾಡಿದ್ರು': ಧನ್ಯವಾದ ಹೇಳಿದ ವಿಜಯಲಕ್ಷ್ಮಿ
'ನನ್ನ ಸಹೋದರಿ ಚಿಕಿತ್ಸೆಗೆ ಸಹಾಯ ಮಾಡಿ' ಎಂದು ನಟಿ ವಿಜಯಲಕ್ಷ್ಮಿ ವಿಡಿಯೋ ಮೂಲಕ ವಿನಂತಿಸಿದ್ದರು. ನಟ ಶಿವಣ್ಣ, ದರ್ಶನ್, ಪುನೀತ್, ಯಶ್ ಸೇರಿದಂತೆ ಕನ್ನಡ ಚಿತ್ರರಂಗ ಹಾಗೂ ಕನ್ನಡ ಅಭಿಮಾನಿಗಳು ನೆರವು ನೀಡಿ ಎಂದು ಕೇಳಿಕೊಂಡಿದ್ದರು.
Recommended Video
ಉಷಾದೇವಿ ಗರ್ಭಕೋಶ ಸಮಸ್ಯೆಯಿಂದ ಬಳಲುತ್ತಿದ್ದು, ಆಕೆಯ ಸ್ಥಿತಿ ಬಹಳ ಗಂಭೀರವಾಗಿದೆ. ದಯವಿಟ್ಟು ಸಹಾಯ ಮಾಡಿ ಎಂದು ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದರು.
ದಯವಿಟ್ಟು ಸಹಾಯಮಾಡಿ, ಶಿವಣ್ಣನ ಗಮನಕ್ಕೆ ತನ್ನಿ: ನಟಿ ವಿಜಯಲಕ್ಷ್ಮಿ ಅಳಲು
ವಿಜಯಲಕ್ಷ್ಮಿಯ ಕಷ್ಟಕ್ಕೆ ಸ್ಪಂದಿಸಿದ ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಸಹಾಯ ಹಸ್ತಚಾಚಿದ್ದಾರೆ. ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಸ್ವತಃ ವಿಜಯಲಕ್ಷ್ಮಿ ಈ ವಿಷಯವನ್ನು ತಿಳಿಸಿದ್ದು, ವಿನೋದ್ ರಾಜ್ಗೆ ಧನ್ಯವಾದ ಅರ್ಪಿಸಿದ್ದಾರೆ.
''ಉಷಾದೇವಿ ಬಹಳ ದಿನಗಳ ನಂತರ ಮಾತನಾಡಿದ್ದಾರೆ. ನಿಮ್ಮೆಲ್ಲರ ಶುಭಾಶಯ ನಮಗೆ ಧೈರ್ಯ ತಂದಿದೆ. ಬಹಳಷ್ಟು ಜನ ಸಹಾಯ ಮಾಡ್ತಿದ್ದಾರೆ. ಫೋನ್ ಮಾಡಿ ಧೈರ್ಯ ತುಂಬುತ್ತಿದ್ದಾರೆ, ಎಲ್ಲರಿಗೂ ಧನ್ಯವಾದ'' ಎಂದು ವಿಜಯಲಕ್ಷ್ಮಿ ಮತ್ತೊಂದು ವಿಡಿಯೋ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಷಾದೇವಿ ಸಹ ವಿಡಿಯೋ ಮೂಲಕ ಕನ್ನಡಿಗರಿಗೆ ಧನ್ಯವಾದ ಎಂದು ಹೇಳಿದ್ದಾರೆ.
''ನನಗೆ ಇಂಡಸ್ಟ್ರಿಯಲ್ಲಿ ಯಾರೂ ಸಹಾಯ ಮಾಡಿಲ್ಲ ಅಂತ ಬೇಜಾರಿಲ್ಲ. ಅವರೆಲ್ಲರ ಆಶೀರ್ವಾದ ಇದೆ ಎಂದು ಭಾವಿಸಿದ್ದೇನೆ. ನನಗೆ ಗೊತ್ತಿದ್ದು ಅಥವಾ ಗೊತ್ತಿಲ್ಲದೇ ಯಾರಿಗಾದರೂ ನೋವುಂಟು ಮಾಡಿದ್ದಾರೆ ದಯವಿಟ್ಟು ನನ್ನನ್ನು ಕ್ಷಮಿಸಿ'' ಎಂದು ವಿಜಯಲಕ್ಷ್ಮಿ ಹೇಳಿಕೊಂಡಿದ್ದಾರೆ.