Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 6 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 9 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೃತ ವಿಷ್ಣು ಅಭಿಮಾನಿಗೆ ಭಾರತಿ ಅವರಿಂದ 25 ಸಾವಿರ ಪರಿಹಾರ
ವಿಷ್ಣುವರ್ಧನ್ ಅವರ ನಾಗರಹಾವು ಚಿತ್ರದ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವೀಗಿಡಾಗಿದ್ದ ವಿಷ್ಣು ಅಭಿಮಾನಿ ಸುಬ್ರಮಣಿ ಕುಟುಂಬಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಅವರು 25 ಸಾವಿರ ರೂಪಾಯಿ ಸಹಾಯ ಧನ ನೀಡಿದ್ದಾರೆ.
ನಿನ್ನೆ (ಅಕ್ಟೋಬರ್ 14) ಜಯನಗರದ ಗರುಡ ಮಾಲ್ ನ 'ಸ್ವಾಗತ್' ಚಿತ್ರಮಂದಿರದಲ್ಲಿ 'ನಾಗರಹಾವು' ಸಿನಿಮಾ ನೋಡುತ್ತಿದ್ದ ವೇಳೆ 34 ವರ್ಷದ ಸುಬ್ರಮಣಿ ಆಲಿಯಾಸ್ ರಾಜು ಬಾಯ್ ಎಂಬುವವರು ಮೃತಪಟ್ಟಿದ್ದರು.
ಕಳೆದ ರಾತ್ರಿ ಸುಬ್ರಮಣಿ ಅವರ ಸಾವಿನ ವಿಷಯ ತಿಳಿದ ವಿಷ್ಣುವರ್ಧನ್ ಅವರ ಅಳಿಯ, ನಟ ಅನಿರುದ್ಧ್, ಸುಬ್ರಮಣಿಯವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದರು.
ಇಂದು ನಟಿ ಭಾರತಿ ವಿಷ್ಣುವರ್ಧನ್ ಸುಬ್ರಮಣಿ ಅವರ ಮನೆಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುಬ್ರಮಣಿ ಕುಟುಂಬದವರಿಗೆ 25 ಸಾವಿರ ರೂಪಾಯಿ ಚೆಕ್ ನೀಡಿ ಸಾಂತ್ವನ ಹೇಳಿದರು.
ವಿಷ್ಣು ವರ್ಧನ್ ಅವರ ಕಟ್ಟಾ ಅಭಿಮಾನಿಯಾಗಿದ್ದ ಸುಬ್ರಮಣಿ ನಿನ್ನೆ ಮಧ್ಯಾಹ್ನ ಸ್ವಾಗತ್ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸುತ್ತಿದ್ದರು. ಚಿತ್ರದ ಕ್ಲೈಮ್ಯಾಕ್ಸನ್ ನಲ್ಲಿ ಗ್ರಾಫಿಕ್ಸ್ ಬಳಸಿ ವಿಷ್ಣುವರ್ಧನ್ ಅವರನ್ನ ತೆರೆ ಮೇಲೆ ತರಲಾಗಿದೆ.['ನಾಗರಹಾವಿ'ನ ಬುಸುಗುಡುವಿಕೆಗೆ ವಿಮರ್ಶಕರ ಪ್ರತಿಕ್ರಿಯೆ ಏನು?]
ಈ ದೃಶ್ಯ ಚಿತ್ರದ ಕೊನೆಯ 10 ನಿಮಿಷ ಮೂಡುತ್ತದೆ. ಈ ವೇಳೆ ವಿಷ್ಣುವರ್ಧನ್ ಅವರು ತೆರೆ ಮೇಲೆ ಕಾಣಿಸಿಕೊಂಡಾಗ ಭಾವೋದ್ವೇಗಕ್ಕೆ ಒಳಗಾದ ಸುಬ್ರಮಣಿಗೆ ಎದೆ ನೋವು ಕಾಣಿಸಿಕೊಂಡು ಸ್ಥಳದಲ್ಲೆ ಕುಸಿದು ಬಿದ್ದಿದ್ದಾರೆ.['ನಾಗರಹಾವು' ವಿಮರ್ಶೆ: ಡಾ.ವಿಷ್ಣುವರ್ಧನ್ 201 ನಾಟೌಟ್ ]
ಕೂಡಲೆ ಪ್ರೇಕ್ಷಕರು ಆಸ್ವತ್ರೆಗೆ ರವಾನಿಸಲು ಮುಂದಾಗಿದ್ದಾರೆ. ಆದರೆ ಮಾರ್ಗ ಮಧ್ಯೆ ಸುಬ್ರಮಣಿ ಅಸುನೀಗಿದ್ದರು. ಸುಬ್ರಮಣಿ ಜಯನಗರ ಸೌಂತ್ ಎಂಡ್ ಸರ್ಕಲ್ ವೃತ್ತದ ಶಾಂತಿ ಚಿತ್ರಮಂದಿರದ ಹಿಂಭಾಗದಲ್ಲಿ ವಾಸವಾಗಿದ್ದರು. ಇಂದು ಅವರ ಅಂತ್ಯ ಸಂಸ್ಕಾರ ನಡೆಯಲಿದೆ.