Don't Miss!
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Technology Tecno: ಬಹುನಿರೀಕ್ಷಿತ ಟೆಕ್ನೋ ಪೋವಾ 6 ಪ್ರೊ ಲಾಂಚ್! 12GB RAM.. 6000mAh ಬ್ಯಾಟರಿ.. ಬೆಲೆ ಎಷ್ಟು?
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಹಸಸಿಂಹ ಬರ್ತಡೇಗೆ 'ವಿಷ್ಣುಪ್ರಿಯ' ತಂಡದಿಂದ ಸರ್ಪ್ರೈಸ್ ಉಡುಗೊರೆ
ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಪಾಲಿನ ಕೋಟಿಗೊಬ್ಬ ಡಾ ವಿಷ್ಣುವರ್ಧನ್ ಅವರ 70ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಾಹಸಸಿಂಹ ಬರ್ತಡೇಯನ್ನು ಮತ್ತಷ್ಟು ವಿಶೇಷವಾಗಿಸಿಕೊಂಡಿದೆ ವಿಷ್ಣುಪ್ರಿಯ ಚಿತ್ರತಂಡ.
ಹೌದು, ನಿರ್ಮಾಪಕ ಕೆ ಮಂಜು ಅವರ ಮಗ ಶ್ರೇಯಸ್ ನಟನೆಯ ವಿಷ್ಣುಪ್ರಿಯ ಚಿತ್ರತಂಡ ವಿಷ್ಣುದಾದಾ ಹುಟ್ಟುಹಬಕ್ಕೆ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಹೃದಯವಂತನ ಜನುಮದಿನಕ್ಕೆ ಶುಭಾಶಯ ತಿಳಿಸಿದೆ.
'ವಿಷ್ಣು ಸಹೋದರ ರವಿ ಹೇಳಿದ 'ಆ ಮಾತು' ನನ್ನ ಕಿವಿಯಲ್ಲಿ ರಿಂಗಣಿಸುತ್ತಿದೆ'
ಅಂದ್ಹಾಗೆ, ವಿಷ್ಣುಪ್ರಿಯ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ. ಈ ಚಿತ್ರವನ್ನು ವಿಕೆ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ಸ್ವತಃ ಕೆ ಮಂಜು ನಿರ್ಮಾಣ ಮಾಡುತ್ತಿದ್ದರು. ಇದು ಶ್ರೇಯಸ್ ಅವರ ಎರಡನೇ ಸಿನಿಮಾ.
Recommended Video
ಇದಕ್ಕೂ ಮುಂಚೆ ಪಡ್ಡೆಹುಲಿ ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದ್ದರು. ಚೊಚ್ಚಲ ಚಿತ್ರ ಪಡ್ಡೆಹುಲಿಯಲ್ಲಿ ವಿಷ್ಣುವರ್ಧನ್ ಅವರನ್ನು ನೆನಪಿಸುವಂತೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದರು.
ವಿಶೇಷ ಅಂದ್ರೆ ಕೆ ಮಂಜು ಅವರು ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿ ಹಾಗೂ ಆಪ್ತ ವ್ಯಕ್ತಿ. ವಿಷ್ಣು ನಟನೆಯ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಇನ್ನುಳಿದಂತೆ ವಿಷ್ಣುಪ್ರಿಯ ಚಿತ್ರದ ಶೂಟಿಂಗ್ ನಡೆಯುತ್ತಿದೆ.