Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗರಹಾವು ವಿಜಯೋತ್ಸವಕ್ಕೆ ಅಭಿಮಾನಿಗಳ ತಯಾರಿ
Recommended Video
ವಿಷ್ಣುದಾದ ಅಭಿನಯದ 'ನಾಗರಹಾವು' ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಜೊತೆಗೆ ಬೇರೆ ಬೇರೆ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ಸಾಹಸ ಸಿಂಹನ ಘರ್ಜನೆ ಮಾತ್ರ ಜೋರಾಗಿಯೇ ಮುಂದುವರೆದಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ವಿಷ್ಣು ಸಿನಿಮಾಗೆ ಭರ್ಜರಿ ಬೇಡಿಕೆ ಹುಟ್ಟಿಕೊಂಡಿದೆ.
ಮರು ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ನಾಗರಹಾವು' ಸಿನಿಮಾದ ವಿಜಯೋತ್ಸವಕ್ಕೆ ಅಭಿಮಾನಿಗಳು ಸಿದ್ದತೆ ನಡೆಸಿದ್ದಾರೆ. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಸಂಭ್ರಮ ಆಚರಣೆ ಮಾಡಲು ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ.
ವಿಷ್ಣು ನಮ್ಮ ಕಣ್ಣ ಮುಂದೆ ಇಲ್ಲದೆ ಇದ್ದರೂ ಅಭಿಮಾನಿಗಳ ಮನಸ್ಸಿನಲ್ಲಿ ಮಾತ್ರ ಇಂದಿಗೂ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ಮತ್ತೆ ನಿರೂಪಿಸುತ್ತಿದ್ದಾರೆ. ಇದೇ ಭಾನುವಾರ ವೀರೇಶ್ ಸಿನಿಮಾ ಮಂದಿರ ಬಳಿ ವಿಷ್ಣುವರ್ಧನ್ ಕಟೌಟ್ ಗಳಿಗೆ ಬೃಹತ್ ಆಕಾರದ ಹಾರಗಳನ್ನು ಹಾಕಿ ಪಟಾಕಿ ಸಿಡಿಸಲಿದ್ದಾರೆ.
ಭಾನುವಾರದಂದು ಸಿನಿಮಾ ನೋಡುವ ಅಭಿಮಾನಿಗಳಿಗಾಗಿ ಚಿತ್ರಮಂದಿರದ ಬಳಿ ಅನ್ನದಾನ ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿದೆ. ಒಟ್ಟಾರೆ, ಸಾಹಸ ಸಿಂಹನನ್ನು ಅಭಿಮಾನಿಗಳು ಎಂದೆಂದಿಗೂ ಪ್ರೀತಿ ಮಾಡುತ್ತಾರೆ ಎನ್ನುವುದನ್ನು ಈ ಮೂಲಕ ನಿರೂಪಿಸುತ್ತಿದ್ದಾರೆ.