Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗರಹಾವು ವಿಜಯೋತ್ಸವಕ್ಕೆ ಅಭಿಮಾನಿಗಳ ತಯಾರಿ
Recommended Video
ವಿಷ್ಣುದಾದ ಅಭಿನಯದ 'ನಾಗರಹಾವು' ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಜೊತೆಗೆ ಬೇರೆ ಬೇರೆ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ಸಾಹಸ ಸಿಂಹನ ಘರ್ಜನೆ ಮಾತ್ರ ಜೋರಾಗಿಯೇ ಮುಂದುವರೆದಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ವಿಷ್ಣು ಸಿನಿಮಾಗೆ ಭರ್ಜರಿ ಬೇಡಿಕೆ ಹುಟ್ಟಿಕೊಂಡಿದೆ.
ಮರು ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ನಾಗರಹಾವು' ಸಿನಿಮಾದ ವಿಜಯೋತ್ಸವಕ್ಕೆ ಅಭಿಮಾನಿಗಳು ಸಿದ್ದತೆ ನಡೆಸಿದ್ದಾರೆ. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಸಂಭ್ರಮ ಆಚರಣೆ ಮಾಡಲು ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ.
ವಿಷ್ಣು ನಮ್ಮ ಕಣ್ಣ ಮುಂದೆ ಇಲ್ಲದೆ ಇದ್ದರೂ ಅಭಿಮಾನಿಗಳ ಮನಸ್ಸಿನಲ್ಲಿ ಮಾತ್ರ ಇಂದಿಗೂ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ಮತ್ತೆ ನಿರೂಪಿಸುತ್ತಿದ್ದಾರೆ. ಇದೇ ಭಾನುವಾರ ವೀರೇಶ್ ಸಿನಿಮಾ ಮಂದಿರ ಬಳಿ ವಿಷ್ಣುವರ್ಧನ್ ಕಟೌಟ್ ಗಳಿಗೆ ಬೃಹತ್ ಆಕಾರದ ಹಾರಗಳನ್ನು ಹಾಕಿ ಪಟಾಕಿ ಸಿಡಿಸಲಿದ್ದಾರೆ.
ಭಾನುವಾರದಂದು ಸಿನಿಮಾ ನೋಡುವ ಅಭಿಮಾನಿಗಳಿಗಾಗಿ ಚಿತ್ರಮಂದಿರದ ಬಳಿ ಅನ್ನದಾನ ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿದೆ. ಒಟ್ಟಾರೆ, ಸಾಹಸ ಸಿಂಹನನ್ನು ಅಭಿಮಾನಿಗಳು ಎಂದೆಂದಿಗೂ ಪ್ರೀತಿ ಮಾಡುತ್ತಾರೆ ಎನ್ನುವುದನ್ನು ಈ ಮೂಲಕ ನಿರೂಪಿಸುತ್ತಿದ್ದಾರೆ.