Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗರಹಾವು ವಿಜಯೋತ್ಸವಕ್ಕೆ ಅಭಿಮಾನಿಗಳ ತಯಾರಿ
Recommended Video
ವಿಷ್ಣುದಾದ ಅಭಿನಯದ 'ನಾಗರಹಾವು' ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಜೊತೆಗೆ ಬೇರೆ ಬೇರೆ ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ಸಾಹಸ ಸಿಂಹನ ಘರ್ಜನೆ ಮಾತ್ರ ಜೋರಾಗಿಯೇ ಮುಂದುವರೆದಿದೆ. ಕೇವಲ ರಾಜ್ಯದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ವಿಷ್ಣು ಸಿನಿಮಾಗೆ ಭರ್ಜರಿ ಬೇಡಿಕೆ ಹುಟ್ಟಿಕೊಂಡಿದೆ.
ಮರು ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ 'ನಾಗರಹಾವು' ಸಿನಿಮಾದ ವಿಜಯೋತ್ಸವಕ್ಕೆ ಅಭಿಮಾನಿಗಳು ಸಿದ್ದತೆ ನಡೆಸಿದ್ದಾರೆ. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಸಂಭ್ರಮ ಆಚರಣೆ ಮಾಡಲು ಎಲ್ಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ.
ವಿಷ್ಣು ನಮ್ಮ ಕಣ್ಣ ಮುಂದೆ ಇಲ್ಲದೆ ಇದ್ದರೂ ಅಭಿಮಾನಿಗಳ ಮನಸ್ಸಿನಲ್ಲಿ ಮಾತ್ರ ಇಂದಿಗೂ ಸ್ಥಾನ ಪಡೆದಿದ್ದಾರೆ ಎನ್ನುವುದನ್ನು ಮತ್ತೆ ನಿರೂಪಿಸುತ್ತಿದ್ದಾರೆ. ಇದೇ ಭಾನುವಾರ ವೀರೇಶ್ ಸಿನಿಮಾ ಮಂದಿರ ಬಳಿ ವಿಷ್ಣುವರ್ಧನ್ ಕಟೌಟ್ ಗಳಿಗೆ ಬೃಹತ್ ಆಕಾರದ ಹಾರಗಳನ್ನು ಹಾಕಿ ಪಟಾಕಿ ಸಿಡಿಸಲಿದ್ದಾರೆ.
ಭಾನುವಾರದಂದು ಸಿನಿಮಾ ನೋಡುವ ಅಭಿಮಾನಿಗಳಿಗಾಗಿ ಚಿತ್ರಮಂದಿರದ ಬಳಿ ಅನ್ನದಾನ ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿದೆ. ಒಟ್ಟಾರೆ, ಸಾಹಸ ಸಿಂಹನನ್ನು ಅಭಿಮಾನಿಗಳು ಎಂದೆಂದಿಗೂ ಪ್ರೀತಿ ಮಾಡುತ್ತಾರೆ ಎನ್ನುವುದನ್ನು ಈ ಮೂಲಕ ನಿರೂಪಿಸುತ್ತಿದ್ದಾರೆ.