Don't Miss!
- Automobiles Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ ಯಡಿಯೂರಪ್ಪ
ಕನ್ನಡ ಚಿತ್ರರಂಗದ ಖ್ಯಾತ ನಟ, ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣವಾಗಬೇಕೆಂಬ ಬಹು ವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂದು ಆನ್ಲೈನ್ ಮೂಲಕ ಸ್ಮಾರಕ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳುವಿನಲ್ಲಿ 5.5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಮೇರು ಚಿತ್ರ ಕಲಾವಿದರೊಬ್ಬರಿಗೆ ಈ ಮೂಲಕ ಸರ್ಕಾರ ಗೌರವ ಸಮರ್ಪಣೆ ಮಾಡಿದಂತಾಗಿದೆ.
ವಿಷ್ಣವರ್ಧನ್ ಅವರ ಹುಟ್ಟೂರಿನಲ್ಲಿಯೇ ಸ್ಮಾರಕ ನಿರ್ಮಾಣವಾಗಬೇಕೆಂಬ ಅಭಿಮಾನಗಳ ಕೂಗಿಗೆ ಪ್ರತಿಫಲ ಸಿಕ್ಕಂತಾಗಿದೆ. ವಿಷ್ಣು ಅವರ ವಿದ್ಯಾಭ್ಯಾಸ ಸಹ ಮೈಸೂರಿನಲ್ಲಿಯೇ ಆಗಿದ್ದು, ಅವರಿಗೂ ಹಾಗೂ ಮೈಸೂರಿಗೂ ಅವಿನಾಭಾವ ನಂಟಿದೆ.
11 ಕೋಟಿ ರೂಪಾಯಿ ಯೋಜನೆ
ಒಟ್ಟು 11 ಕೋಟಿ ರೂಪಾಯಿ ಯೋಜನೆ ಇದಾಗಿದ್ದು, 5.5 ಎಕರೆ ಜಾಗದಲ್ಲಿ 2 ಎಕರೆಯಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ತಲೆ ಎತ್ತಲಿದೆ. ಜೊತೆಗೆ 6 ಅಡಿ ಎತ್ತರದ ವಿಷ್ಣುವರ್ಧನ್ ಅವರ ಪುತ್ಥಳಿಯೂ ತಲೆ ಎತ್ತುತ್ತಿದೆ.
ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಸಹ ಪ್ರಾರಂಭ
ಪುಣೆಯ ಫಿಲ್ಮ್ ಆಂಡ್ ಟೆಲಿವಿಷನ್ ಇನ್ಸಿಟಿಟ್ಯೂಟ್ ಆಫ್ ಇಂಡಿಯಾದ ಶಾಖೆ ಸಹ ಇಲ್ಲಿ ಆರಂಭವಾಗಲಿದ್ದು, ಇದರ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಂತಾಗುತ್ತದೆ. ಅಲ್ಲದೆ, ಇಲ್ಲಿ ಮ್ಯೂಸಿಯಂ ಸಹ ನಿರ್ಮಾಣಗೊಳ್ಳುವುದರಿಂದ ವಿಷ್ಣು ಅವರ ನೆನಪುಗಳು ಚಿತ್ರರಸಿಕರ ಕಣ್ಮನ ಸೆಳೆಯಲಿದೆ.
ವಿಷ್ಣುವರ್ಧನ್ ಕುಟುಂಬದವರಿಗೆ ಸಹಕಾರ
ಈ ವಿಚಾರವಾಗಿ ಡಾ. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಹಾಗೂ ಕುಟುಂಬದವರಿಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
Recommended Video
ಹಲವು ಪ್ರಮುಖರು ಹಾಜರಿದ್ದರು
ಈ ಸರಳ ಸಮಾರಂಬದಲ್ಲಿ ಶಾಸಕ ಜಿ.ಟಿ.ದೇವೆಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ, ಶಾಸಕ ಎಸ್.ಎ.ರಾಮದಾಸ್, ಜಿಪಂ ಅಧ್ಯಕ್ಷೆ ಪರಿಮಳಾ ಶ್ಯಾಂ ಇತರರು ಹಾಜರಿದ್ದರು.