Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಕ್ಸ್ ಆಫೀಸಲ್ಲಿ ಗರ್ಜಿಸಿದ ವಿಷ್ಣುದಾದಾ 'ಖೈದಿ'
ಕೋಟ್ಯಾಂತರ ರುಪಾಯಿ ಬಂಡವಾಳ ಹೂಡಿ ನಿರ್ಮಿಸಿದ ಚಿತ್ರಗಳ ಹಣೆಬರಹವೇ ಇಂದು ಹೇಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅಂತಹದರಲ್ಲಿ ಮೂವತ್ತು ವರ್ಷಗಳ ಹಿಂದೆ ತೆರೆಕಂಡಂತಹ ಚಿತ್ರವೊಂದು ಬಾಕ್ಸ್ ಆಫೀಸಲ್ಲಿ ಸದ್ದು ಮಾಡುತ್ತಿದೆ ಎಂದರೆ ಅಚ್ಚರಿಯಾಗುತ್ತದೆ ಅಲ್ಲವೆ.
ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ 'ಖೈದಿ' (1984) ಚಿತ್ರ ರೀ ರಿಲೀಸ್ ಆಗಿ ವಿಷ್ಣುದಾದಾ ಅಭಿಮಾನಿಗಳ ಪಾಲಿಗೆ ಸಂತಸದ ಸಂಗತಿಯಾಗಿದೆ. ಇದೀಗ ಬೆಂಗಳೂರಿನ ತ್ರಿವೇಣಿ ಚಿತ್ರಮಂದಿರದಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. [ಮೂವತ್ತು ವರ್ಷಗಳ ಬಳಿಕ ವಿಷ್ಣು 'ಖೈದಿ' ರಿಲೀಸ್]
ಈ ಚಿತ್ರವನ್ನು ವಿಷ್ಣು ಅಭಿಮಾನಿಗಳಾದ ಕುಮಾರ್, ಸತೀಶ್, ಗೋವಿಂದ್ ಎಂಬುವವರು ಮರು ಬಿಡುಗಡೆ ಮಾಡಿದ್ದರು. ವೃತ್ತಿಯಲ್ಲಿ ಆಟೋ ಚಾಲಕರಾದ ಇವರು ಹಳೆ ಪ್ರಿಂಟನ್ನು ಸಿನಿಮಾ ಸ್ಕೋಪ್ ರೂಪಕ್ಕೆ ತಂದು ಯುಎಫ್ ಓ ತಂತ್ರಜ್ಞಾನ ಅಳವಡಿಸಿ ರೀ ರಿಲೀಸ್ ಮಾಡಿದ್ದರು.
ಚಿತ್ರ ಮೂವತ್ತು ವರ್ಷಗಳ ಬಳಿಕ ತೆರೆಕಂಡರೂ ಅಭಿಮಾನಿಗಳು ಇದೇ ಮೊದಲು ಬಿಡುಗಡೆಯಾದಂತೆ ಚಿತ್ರವನ್ನು ನೋಡಿ ಆನಂದಿಸುತ್ತಿದ್ದಾರೆ. ತೆಲುಗಿನ 'ಖೈದಿ' ಚಿತ್ರದ ರೀಮೇಕ್ ಇದು. ಮೂಲ ಚಿತ್ರದಲ್ಲಿ ಚಿರಂಜೀವಿ ಹಾಗೂ ಮಾಧವಿ ಮುಖ್ಯ ಪಾತ್ರಧಾರಿಗಳು. ಈ ಚಿತ್ರದ "ತಾಳೆ ಹೂವ ಪೊದೆಯಿಂದ..." (ಚಿ.ಉದಯಶಂಕರ್ ಸಾಹಿತ್ಯ) ಹಾಡು ಆಗಿನ ಕಾಲಕ್ಕೆ ಬುಸ್ ಬುಸ್ ಎಂದು ಸಾಕಷ್ಟು ಸದ್ದು ಮಾಡಿತ್ತು.
ಚಕ್ರವರ್ತಿ ಸಂಗೀತ, ವಿ ಲಕ್ಷ್ಮಣ್ ಅವರ ಛಾಯಾಗ್ರಹಣ, ಡಿ ವೆಂಕಟರತ್ನಂ ಅವರ ಸಂಕಲನ, ಚಿನ್ನಿ ಪ್ರಕಾಶ್ ಮತ್ತು ತಾರಾ ಅವರ ನೃತ್ಯ ಸಂಯೋಜನೆ, ನಾಗರಾಜ್ ಅವರ ಕಲೆ ಇರುವ ಚಿತ್ರವನ್ನು ಡಿವಿ ಸುಧೀಂದ್ರ ಅವರು ಪ್ರಚಾರ ಮಾಡಿದ್ದರು. ಈಗ ಮತ್ತೊಂದು ಬೆಳ್ಳಿತೆರೆಯ ಮೇಲೆ ವೀಕ್ಷಿಸುವ ಅವಕಾಶ. (ಏಜೆನ್ಸೀಸ್)