Don't Miss!
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣುವರ್ಧನ್ ಜನ್ಮದಿನದಂದು 'ಹೃದಯ ಗೀತೆ': ಇದರ ಹಿಂದಿದೆ ಒಳ್ಳೆ ಉದ್ದೇಶ.!
Recommended Video
ಸೆಪ್ಟೆಂಬರ್ 18... ಸಾಹಸ ಸಿಂಹ, ಡಾ.ವಿಷ್ಣುವರ್ಧನ್ ರವರ 68ನೇ ಜನ್ಮದಿನ. ಈ ದಿನವನ್ನ ಅರ್ಥಪೂರ್ಣವಾಗಿ ಆಚರಿಸಲು 'ಹೃದಯವಂತ'ನ ಕುಟುಂಬ ಮುಂದಾಗಿದೆ.
ವಿಭಾ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಬೆಂಗಳೂರು ಸೌಥ್ ಸಹಯೋಗದೊಂದಿಗೆ ಸೆಪ್ಟೆಂಬರ್ 14 ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಸಂಜೆ 6 ಗಂಟೆಗೆ 'ಹೃದಯ ಗೀತೆ' ಎಂಬ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಷ್ಣು ಸ್ಮಾರಕ ವಿಚಾರಕ್ಕೆ ನಾವೇ ಮುಂದೆ ನಿಲ್ಲುತ್ತೇವೆ ಎಂದ ಶಿವಣ್ಣ
ಈ ಸಂಗೀತ ಕಾರ್ಯಕ್ರಮದಲ್ಲಿ ಭಾರತಿ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಖ್ಯಾತ ತಾರೆಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಿಂದ ಬರುವ ಹಣವನ್ನು ಸುಮಾರು 140ಕ್ಕೂ ಹೆಚ್ಚು ಹೃದಯ ಸಂಬಂಧಿ ರೋಗದಿಂದ ಬಳಲುತ್ತಿರುವ ಮಕ್ಕಳ ಶಸ್ತ್ರ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು.
ಬರ್ತಡೇ ದಿನ ವಿಷ್ಣು ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಸುದೀಪ್
ಸೆಪ್ಟೆಂಬರ್ 18 ರಂದು ನಗರದ ಪ್ರಖ್ಯಾತ ಆಡಿಟೋರಿಯಂ ನಲ್ಲಿ ಅನಿರುದ್ಧ್ ನಿರ್ದೇಶಕ ಮಾಡಿರುವ ಆರು ಕಿರುಚಿತ್ರಗಳ ಪ್ರದರ್ಶನ ಆಗಲಿದೆ.
ಒಟ್ಟಾರೆ, ಪ್ರತಿ ವರ್ಷದಂತೆ ಈ ವರ್ಷ ಕೂಡ ಡಾ.ವಿಷ್ಣುವರ್ಧನ್ ಜನ್ಮದಿನವನ್ನ ಕುಟುಂಬ ವರ್ಗ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.