twitter
    For Quick Alerts
    ALLOW NOTIFICATIONS  
    For Daily Alerts

    ಸೆಟ್ ನಲ್ಲಿ ಶ್ರುತಿ ಹೇಳಿದ ಹಾಗೆ ಏನೂ ನಡೆದಿಲ್ಲ: ಪೊಲೀಸರ ಮುಂದೆ ನಿರ್ದೇಶಕ ಹೇಳಿಕೆ.!

    |

    Recommended Video

    #metoo: ಕಬ್ಬನ್ ಪಾರ್ಕ್ ಪೊಲೀಸರಿಂದ ಮುಂದುವರಿದ ವಿಚಾರಣೆ | FILMIBEAT KANNADA

    ನಟ ಅರ್ಜುನ್ ಸರ್ಜಾ ಹಾಗೂ ನಟಿ ಶ್ರುತಿ ಹರಿಹರನ್ ಕುರಿತಾದ #ಮೀಟೂ ಆರೋಪ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಅತ್ತ ಅರ್ಜುನ್ ಸರ್ಜಾ ಕೋರ್ಟ್ ಮೆಟ್ಟಿಲೇರಿದ್ದರೆ, ಇತ್ತ ಶ್ರುತಿ ಹರಿಹರನ್ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

    ಶ್ರುತಿ ಹರಿಹರನ್ ನೀಡಿರುವ ದೂರಿನ ಅನ್ವಯ ಎಫ್.ಐ.ಆರ್ ದಾಖಲು ಮಾಡಿಕೊಂಡಿರುವ ಕಬ್ಬನ್ ಪಾರ್ಕ್ ಪೊಲೀಸರು ಸಾಕ್ಷಿಗಳ ವಿಚಾರಣೆ ನಡೆಸುತ್ತಿದ್ದಾರೆ.

    ಅದರಂತೆ ಇವತ್ತು ತಮ್ಮ ಹೇಳಿಕೆ ನೀಡಲು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಗೆ 'ವಿಸ್ಮಯ' ಚಿತ್ರದ ನಿರ್ದೇಶಕ ಅರುಣ್ ವೈದ್ಯನಾಥನ್ ಬಂದಿದ್ದರು.

    ''ನಾನು ಅರ್ಜುನ್ ಸರ್ಜಾ ಪರವಾಗಿ ನಿಂತಿದ್ದೇನೆ. ಯಾಕಂದ್ರೆ ಶೂಟಿಂಗ್ ಸೆಟ್ ನಲ್ಲಿ ನನ್ನ ಮುಂದೆ ಅಂತಹ ಘಟನೆ ನಡೆದಿಲ್ಲ'' ಎಂದು ಪೊಲೀಸರ ಮುಂದೆ ನಿರ್ದೇಶಕ ಅರುಣ್ ವೈದ್ಯನಾಥನ್ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಅರುಣ್ ವೈದ್ಯನಾಥನ್ ಪ್ರತಿಕ್ರಿಯೆ ನೀಡಿರುವುದು ಹೀಗೆ -

    ಬೇಸರ ಆಗಿದೆ

    ಬೇಸರ ಆಗಿದೆ

    ''ಈ ತರಹ ಬೆಳವಣಿಗೆ ಆಗಿರುವ ಬಗ್ಗೆ ನನಗೆ ತುಂಬಾ ಬೇಸರ ಇದೆ. ಫೇಸ್ ಬುಕ್ ನಲ್ಲಿ ನಾನು ಬರೆದುಕೊಂಡಂತೆ ಪೊಲೀಸರ ಮುಂದೆ ವಿವರವಾಗಿ ಹೇಳಿಕೆ ಕೊಟ್ಟಿದ್ದೇನೆ. ಅರ್ಜುನ್ ಸರ್ಜಾ ನನ್ನ ಸ್ನೇಹಿತ, ಆತ ತುಂಬಾ ಒಳ್ಳೆಯ ಮನುಷ್ಯ'' - ಅರುಣ್ ವೈದ್ಯನಾಥನ್, 'ವಿಸ್ಮಯ' ನಿರ್ದೇಶಕ

    'ವಿಸ್ಮಯ' ಸೆಟ್ ನಲ್ಲಿ ಆಗಿದ್ದೇನು: ನಿರ್ದೇಶಕ ಅರುಣ್ ವೈದ್ಯನಾಥನ್ ಏನಂತಾರೆ.?'ವಿಸ್ಮಯ' ಸೆಟ್ ನಲ್ಲಿ ಆಗಿದ್ದೇನು: ನಿರ್ದೇಶಕ ಅರುಣ್ ವೈದ್ಯನಾಥನ್ ಏನಂತಾರೆ.?

    ಸತ್ಯ ಗೆಲ್ಲಲಿ

    ಸತ್ಯ ಗೆಲ್ಲಲಿ

    ''ಏನಾಯ್ತು ಅಂತ ಶ್ರುತಿ ಒಬ್ಬರೇ ಹೇಳಬೇಕು. ನನ್ನ ಮುಂದೆ ಏನಾಯ್ತು ಅಂತ ನಾನು ಪೊಲೀಸರಿಗೆ ಹೇಳಿದ್ದೇನೆ. ಪೊಲೀಸರು ತನಿಖೆ ಮಾಡಲಿ. ಸತ್ಯ ಗೆಲ್ಲಲಿ'' ಎನ್ನುತ್ತಾರೆ 'ವಿಸ್ಮಯ' ಡೈರೆಕ್ಟರ್ ಅರುಣ್ ವೈದ್ಯನಾಥನ್

    ಸರ್ಜಾ ವಿರುದ್ಧ ಇಷ್ಟು ದಿನ ಹೇಳಿದ್ದು ಒಂದೇ, ಈಗ ಹೇಳ್ತಿರೋದು ಐದು ಆರೋಪ.!ಸರ್ಜಾ ವಿರುದ್ಧ ಇಷ್ಟು ದಿನ ಹೇಳಿದ್ದು ಒಂದೇ, ಈಗ ಹೇಳ್ತಿರೋದು ಐದು ಆರೋಪ.!

    ಶ್ರುತಿ ಯಾವತ್ತೂ ಕಂಪ್ಲೇಂಟ್ ಮಾಡಿಲ್ಲ

    ಶ್ರುತಿ ಯಾವತ್ತೂ ಕಂಪ್ಲೇಂಟ್ ಮಾಡಿಲ್ಲ

    ''ಶೂಟಿಂಗ್ ನಲ್ಲಿ ಎಲ್ಲರೂ ಚೆನ್ನಾಗಿದ್ವಿ. ಯಾವುದೇ ಸಮಸ್ಯೆ ಇರಲಿಲ್ಲ. ಆಗಸ್ಟ್ 2018 ರವರೆಗೂ ನಾನು ಶ್ರುತಿ ಜೊತೆ ಮಾತನಾಡುತ್ತಿದ್ದೆ. ಈ ತರಹ ಸಮಸ್ಯೆ ಆಗಿದೆ ಎಂದು ಶ್ರುತಿ ನನ್ನ ಬಳಿ ಯಾವತ್ತೂ ಕಂಪ್ಲೇಂಟ್ ಮಾಡಿಲ್ಲ'' - ಅರುಣ್ ವೈದ್ಯನಾಥನ್, 'ವಿಸ್ಮಯ' ನಿರ್ದೇಶಕ

    ಸರ್ಜಾ ವಿರುದ್ಧ ಆರು ಜನರನ್ನ ಸಾಕ್ಷಿಯನ್ನಾಗಿಸಿದ ಶ್ರುತಿ ಹರಿಹರನ್.!ಸರ್ಜಾ ವಿರುದ್ಧ ಆರು ಜನರನ್ನ ಸಾಕ್ಷಿಯನ್ನಾಗಿಸಿದ ಶ್ರುತಿ ಹರಿಹರನ್.!

    ಅರ್ಜುನ್ ಸರ್ಜಾ ಪರವಾಗಿ ನಿಂತ ನಿರ್ದೇಶಕ

    ಅರ್ಜುನ್ ಸರ್ಜಾ ಪರವಾಗಿ ನಿಂತ ನಿರ್ದೇಶಕ

    ''ನಾನು ಅರ್ಜುನ್ ಸರ್ಜಾ ಪರವಾಗಿ ನಿಂತಿದ್ದೇನೆ. ಯಾಕಂದ್ರೆ ಶೂಟಿಂಗ್ ಸೆಟ್ ನಲ್ಲಿ ನನ್ನ ಮುಂದೆ ಅಂತಹ ಘಟನೆ ನಡೆದಿಲ್ಲ. ಇದನ್ನೇ ನಾನು ಪೊಲೀಸರ ಮುಂದೆ ಹೇಳಿದ್ದೇನೆ'' - ಅರುಣ್ ವೈದ್ಯನಾಥನ್, 'ವಿಸ್ಮಯ' ನಿರ್ದೇಶಕ

    ಶ್ರುತಿ ಹರಿಹರನ್ ಗೆ ಪ್ರಶ್ನೆಗಳ ಬಾಣಗಳನ್ನು ತೂರಿದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ.!ಶ್ರುತಿ ಹರಿಹರನ್ ಗೆ ಪ್ರಶ್ನೆಗಳ ಬಾಣಗಳನ್ನು ತೂರಿದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ.!

    English summary
    Vismaya Director Arun Vaidyanathan register his statements with Cubbon Park Police, Bengaluru.
    Wednesday, October 31, 2018, 15:42
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X