Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವೇಕ್ ಒಬೆರಾಯ್ ಗೆ ಜೀವ ಬೆದರಿಕೆ : ಪೊಲೀಸ್ ರಕ್ಷಣೆಯಲ್ಲಿ ನಟ
ಬಾಲಿವುಡ್ ನಟ ವಿವೇಕ್ ಒಬೆರಾಯ್ ಇತ್ತೀಚಿಗಷ್ಟೆ ಹೊಸದೊಂದು ವಿವಾದ ಮಾಡಿಕೊಂಡು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದರು. ಇದರ ನಡುವೆ ಮತ್ತೊಂದು ಮತ್ತೊಂದು ಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ವಿವೇಕ್ ಒಬೆರಾಯ್ ಗೆ ಜೀವ ಬೆದರಿಕೆ ಕೆರಗಳು ಬರುತ್ತಿವೆಯಂತೆ.
ಸದ್ಯ ವಿವೇಕ್ ಪೊಲೀಸ್ ರಕ್ಷಣೆ ಕೇಳಿದ್ದು ಮುಂಬೈ ಪೊಲೀಸರ ಭದ್ರತೆಯಲ್ಲಿ ವಾಸಿಸುವಂತಾಗಿದೆ. ಅಷ್ಟಕ್ಕು ಜೀವ ಬೆದರಿಕೆ ಕರೆ ಬರುತ್ತಿರುವ ಕಾರಣ ವಿವೇಕ್ ಇತ್ತೀಚಿಗೆ ನಟಿ ಐಶ್ವರ್ಯ ರೈ ವಿರುದ್ಧ ಅವಿವೇಕ ಟ್ವೀಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದರು.
ಐಶ್ವರ್ಯ ರೈ ಕೆಣಕಿ ತಪ್ಪು ಮಾಡಿದ್ದ ವಿವೇಕ್ ಒಬೆರಾಯ್ ಕ್ಷಮೆಯಾಚನೆ
ಚುನಾವಣೆ ಫಲಿತಾಂಶಕ್ಕೆ ಹೋಲಿಸಿ ವಿವೇಕ್ ಒಬೆರಾಯ್ ಸೇರಿದಂತೆ ಐಶ್ವರ್ಯ ರೈ ಮತ್ತು ಸಲ್ಮಾನ್ ಫೋಟೋವನ್ನು ಟ್ರೋಲ್ ಮಾಡಲಾಗಿತ್ತು. ಆ ಫೋಟೋವನ್ನು ವಿವೇಕ್ ಒಬೆರಾಯ್ ಟ್ವಿಟ್ಟರ್ ನಲ್ಲಿ ಶೇರ್ ಮಾಡುವ ಮೂಲಕ ನೆಟ್ಟಿಗರ ಮತ್ತು ಬಾಲಿವುಡ್ ಸೆಲೆಬ್ರಿಟಿಗಳ ಆಕ್ರೋಶಕ್ಕೆ ಗುರಿಯಾಗಿದ್ದರು.
ಅಷ್ಟೆಯಲ್ಲ ಕ್ಷಮೆಯಾಚಿಸದಿದ್ದರೆ ವಿವೇಕ್ ವಿರುದ್ಧ ಕಾನೂನು ಕ್ರಮ ಎದುರಿಸ ಬೇಕಾಗುತ್ತೆ. ಅಲ್ಲದೆ ಟ್ವಿಟ್ಟರ್ ಖಾತೆಯಲ್ಲೆ ಡಿಲಿಟ್ ಮಾಡಿಸಬೇಕಾಗುತ್ತೆ ಎಂದು ಮಹಿಳಾ ಆಯೋಗ ಎಚ್ಚರಿಕೆ ನೀಡಿತ್ತು.
ಐಶ್ವರ್ಯ ರೈ ಫೋಟೋ ಶೇರ್ ಮಾಡಿದ ವಿವೇಕ್ ವಿರುದ್ಧ ನೆಟ್ಟಿಗರ ಆಕ್ರೋಶ
ಈ ಟ್ವೀಟ್ ನಲ್ಲಿ ತಪ್ಪೇನಿದೆ ಕ್ಷಮೆ ಕೇಳುವ ಮಾತೆ ಇಲ್ಲ ಎಂದು ಖಡಕ್ ಆಗಿಯೆ ಹೇಳುವ ಮೂಲಕ, ಟ್ವೀಟ್ ಮಾಡಿರುವುದನ್ನು ಸಮರ್ಥಿಸಿಕೊಂಡಿದ್ದರು ವಿವೇಕ್ ಒಬೆರಾಯ್. ಆ ನಂತರ ಎಲ್ಲಾ ಕಡೆಯಿಂದ ಭಾರಿ ವಿವಾದ ವ್ಯಕ್ತವಾದ ಹಿನ್ನಲೆ ಟ್ವೀಟ್ ಡಿಲಿಟ್ ಮಾಡಿ ಕ್ಷಮೆಯಾಚಿಸಿದ್ದರು.