Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರತಿಯೊಬ್ಬ ಕನ್ನಡಿಗನೂ ನೋಡಲೇಬೇಕಾದ ವಿಡಿಯೋ
ಸ್ಯಾಂಡಲ್ ವುಡ್ ನ ಕೆಲವು ಹಾಡುಗಾರರು ಹಾಗೂ ಸಂಗೀತಗಾರರು ಸೇರಿಕೊಂಡು ರಾಷ್ಟ್ರಕವಿ ಕುವೆಂಪು ಅವರ 'ಬಾರಿಸು ಕನ್ನಡ ಡಿಂಡಿಮವ' ಹಾಡನ್ನು ವಿಡಿಯೋ ಸಾಂಗ್ ಮಾಡುವ ಮೂಲಕ ಮತ್ತೊಮ್ಮೆ ಸತ್ತಂತಿಹ ಕನ್ನಡಿಗರನ್ನು ಬಡಿದೆಚ್ಚರಿಸಿದ್ದಾರೆ.
ಈಗಾಗಲೇ ಯೂಟ್ಯೂಬ್ ನಲ್ಲಿ ಹರಿದಾಡುತ್ತಿರುವ ಈ ವಿಡಿಯೋ ವನ್ನು ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿ ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಎಲ್ಲರ ಫೇಸ್ ಬುಕ್ ನಲ್ಲಿ ಓಡಾಡುತ್ತಿರುವ ವಿಡಿಯೋ ಭಾರಿ ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿದೆ.
ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರು ಮ್ಯೂಸಿಕ್ ಕಂಪೋಸ್ ಮಾಡಿದ್ದು, ಉದಿತ್ ಹರಿತಾಸ್, ಅನನ್ಯ ಭಟ್, ನವೀನ್, ಸಜ್ಜು, ಮುಂತಾದವರು ಹಾಡಿಗೆ ಧ್ವನಿಯಾಗುವ ಮೂಲಕ ಕುವೆಂಪು ಅವರಿಗೆ ಗೌರವ ಸಲ್ಲಿಸಿದ್ದಾರೆ.
ಇದೀಗ ಈ ಹಾಡು ಎಲ್ಲೆಡೆ ವೈರಲ್ ಆಗಿದ್ದು, ಕನ್ನಡಭಿಮಾನಿಗಳನ್ನು ಬಡಿದೆಬ್ಬಿಸುತ್ತಿದೆ. ಈಗಾಗಲೇ ಕೆಲವರು ಈ ಹಾಡಿನ ಸ್ವಲ್ಪ ಆಡಿಯೋ ಭಾಗವನ್ನು ಕತ್ತರಿಸಿ ವಾಟ್ಸಪ್ ಮೂಲಕ ಹರಿಯಬಿಟ್ಟು ಎಲ್ಲರು ರಿಂಗ್ ಟೋನ್ ಮಾಡುವ ಮೂಲಕ ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಇದು ಟ್ರೆಂಡ್ ಆಗುವಂತೆ ಮಾಡಲು ಪ್ಲಾನ್ ಮಾಡುತ್ತಿದ್ದಾರೆ.
ನೀವು ನೋಡಿ ನಿಮ್ಮವರಿಗೂ ತೋರಿಸಿ ಈ ಹಾಡಿನ ಮೂಲಕ ನಾವು ದೇಶಭಕ್ತಿಯನ್ನು ಇನ್ನು ಹೆಚ್ಚಿಸೋಣ.
ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ ಹಾಡಿನ ವಿಡಿಯೋ ಇಲ್ಲಿದೆ ನೋಡಿ..
ಹಾಡಿನ ನಿರ್ಮಾಣ: ಕರ್ನಾಟಕ ಸರ್ಕಾರ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕೃಪಾಕರ ಸೇನಾನಿ ವೈಶಿಷ್ಟ್ಯಗಳು ಇದರ ಸಹಯೋಗದಲ್ಲಿ
ಸಾಹಿತ್ಯ: ಕುವೆಂಪು
ಕಾನ್ಸೆಪ್ಟ್ ಮತ್ತು ನಿರ್ದೇಶನ: ಸುನೀಲ್ ಮೈಸೂರು
ಸಂಗೀತ: ಪೂರ್ಣಚಂದ್ರ ತೇಜಸ್ವಿ
ಹಾಡುಗಾರರು: ಪೂರ್ಣಚಂದ್ರ ತೇಜಸ್ವಿ, ಉದಿತ್ ಹರಿತಾಸ್, ಬಪ್ಪಿ ಬ್ಲೋಸಮ್, ನವೀನ್ ಸಜ್ಜು, ಕನ್ನಿಕ, ಅನನ್ಯ ಭಟ್, ಪ್ರಥ್ವಿ ಭಾರದ್ವಾಜ್, ಭೂಮಿಕ, ಪಂಚಮ್ ಜೀವಾ, ಗೌತಮ್, ಶ್ರೇಯಸ್ ದೇವನೂರು,