Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲರೂ ಮದುವೆಗೆ ಬನ್ನಿ ಎಂದು ಆಹ್ವಾನ ನೀಡಿದ ದರ್ಶನ್
ತೂಗುದೀಪ ಪ್ರೊಡಕ್ಷನ್ಸ್ ಅಡಿಯಲ್ಲಿ ಮೂಡಿಬರುತ್ತಿರುವ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರ್ಪಿಸುವ ಫ್ಯಾಮಿಲಿ ಎಂರ್ಟಟೈನರ್ 'ಮದುವೆಯ ಮಮತೆಯ ಕರೆಯೋಲೆ' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.
ಈ ಟೀಸರ್ ನಲ್ಲಿ ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು ಎಲ್ಲಾ ಪ್ರೇಕ್ಷಕರಿಗೆ ಮತ್ತು ಅಭಿಮಾನಿಗಳಿಗೆ 'ಈ ಮದುವೆ ಚಿತ್ರಮಂದಿರಗಳಲ್ಲಿ ನಡೆಯುತ್ತಿದೆ ಎಲ್ಲರೂ ಮದುವೆಗೆ ಬನ್ನಿ ಎಂದು 'ಮದುವೆಯ ಕರೆಯೋಲೆ' ನೀಡಿದ್ದಾರೆ.
ಗೀತರಚನೆಕಾರರಾಗಿದ್ದ ಕವಿರಾಜ್ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ಇದೇ ಮೊದಲ ಬಾರಿಗೆ ಆಕ್ಷನ್-ಕಟ್ ಹೇಳಿರುವ 'ಮದುವೆಯ ಮಮತೆಯ ಕರೆಯೋಲೆ' ಸಿನಿಮಾ ಈಗಾಗಲೇ ಬಿಡುಗಡೆಗೆ ತಯಾರಾಗಿ ನಿಂತಿದೆ.[ಕುಂಬಳಕಾಯಿಯತ್ತ, 'ಮದುವೆಯ ಮಮತೆಯ ಕರೆಯೋಲೆ' ]
ನವನಟ ಸೂರಜ್ ಮತ್ತು ಸ್ಯಾಂಡಲ್ ವುಡ್ ನ ಬೇಬಿ ಡಾಲ್ ಅಮೂಲ್ಯ ಅವರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ 'ಮದುವೆಯ ಮಮತೆಯ ಕರೆಯೋಲೆ' ಚಿತ್ರ ಜನವರಿ ತಿಂಗಳಿನಲ್ಲಿ ಹೊಸ ವರ್ಷಕ್ಕೆ ರಿಲೀಸ್ ಆಗುತ್ತಿದೆ.[ಕಿಚ್ಚನಿಗೆ 'ಮದುವೆಯ ಕರೆಯೋಲೆ' ನೀಡಲು ಅರಮನೆಗೆ ಬಂದ ಅಮೂಲ್ಯ]
ಈಗಾಗಲೇ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮ್ಯೂಸಿಕ್ ಕಂಪೋಸ್ ಮಾಡಿರುವ ಚಿತ್ರದ ಆಡಿಯೋ ಸೂಪರ್ ಹಿಟ್ ಆಗಿದ್ದು, ಚಿತ್ರದಲ್ಲಿ ಅನಂತ್ ನಾಗ್, ಚಿತ್ರಾ, ಅಚ್ಯುತ್ ಕುಮಾರ್, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಮಿಂಚಿದ್ದಾರೆ.
ತೂಗುದೀಪ ಪ್ರೊಡಕ್ಷನ್ಸ್ ಅಡಿಯಲ್ಲಿ ನಡೆಯಲಿರುವ ಮದುವೆಗೆ ದರ್ಶನ್ ಅವರು ಯಾವ ರೀತಿ ಕರೆಯೋಲೆ ನೀಡಿದ್ದಾರೆ ಎಂಬುದು ಈ ವಿಡಿಯೋ ಝಲಕ್ ನಲ್ಲಿದೆ ನೋಡಿ..