Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳು ಕಂದನಿಗೆ ಹೃದಯವನ್ನೇ ಎತ್ತಿ ಕೊಟ್ಟ ನಮ್ಮ ರಾಕಿಂಗ್ ಯಶ್
ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಂ ಅವರು 'ಸ್ಪಿರಿಟ್ ಆಫ್ ಚೆನ್ನೈ' ಎಂಬ ಆಲ್ಬಂ ಸಾಂಗ್ ಒಂದನ್ನು ಹೊರತಂದಿದ್ದು, ಆ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿದೆ.
ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಪ್ರವಾಹದ ಬಗ್ಗೆ 'ಐ' ಖ್ಯಾತಿಯ ನಟ ಕಮ್ ನಿರ್ದೇಶಕ ಚಿಯಾನ್ ವಿಕ್ರಂ ಅವರು ತಾವೇ ನಿರ್ದೇಶನ ಮಾಡಿ ಸುಂದರವಾದ ವಿಡಿಯೋ ಒಂದನ್ನು ಹೊರತಂದಿದ್ದಾರೆ.[ಪವರ್ ಸ್ಟಾರ್ ಗೆ ಆಕ್ಷನ್-ಕಟ್ ಹೇಳ್ತಾರಂತೆ ತಮಿಳಿನ ವಿಕ್ರಂ]
ಅಂದಹಾಗೆ ಈ ವಿಡಿಯೋ ಆಲ್ಬಂನ ವಿಶೇಷ ಏನಪ್ಪಾ ಅಂದ್ರೆ ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್ ಸೇರಿದಂತೆ ಮಾಲಿವುಡ್ ನಿಂದ ಒಬ್ಬೊಬ್ಬ ಸ್ಟಾರ್ ನಟರನ್ನು ಚೆನ್ನೈಗೆ ಕರೆಸಿಕೊಂಡು ಈ ಹಾಡಿನಲ್ಲಿ ಸೇರಿಸಿಕೊಳ್ಳಲಾಗಿದೆ.
ಇಡೀ ಚಿತ್ರರಂಗದ ಸ್ಟಾರ್ ನಟ-ನಟಿಯರನ್ನು ಒಂದೇ ಫ್ರೇಮ್ ನಲ್ಲಿ ಸೇರಿಸಿಕೊಂಡು ಮಾಡಿರುವ 'ಸ್ಪಿರಿಟ್ ಆಫ್ ಚೆನ್ನೈ' ವಿಡಿಯೋ ಆಲ್ಬಂ ನೋಡುಗರ ಮನಕಲಕುವಂತಿದೆ. ಮಾತ್ರವಲ್ಲದೇ 'ಏನಾದರೂ ಅವಘಡ ಸಂಭವಿಸಿದರೆ ಮಾತ್ರ ನಾವೆಲ್ಲಾ ಒಂದಾಗಬೇಕಾ? ಇಲ್ಲದಿದ್ದಲ್ಲಿ ಒಂದಾಗಬಾರದೇ?, ಎಂಬ ಸಂದೇಶ ಇರುವ ಈ ವಿಡಿಯೋ ಖಂಡಿತ ಎಲ್ಲರಿಗೂ ಇಷ್ಟವಾಗುತ್ತದೆ. ಈ ಸುಂದರ ವಿಡಿಯೋ ನೀವು ನೋಡಿ..
ಈ ಜಾಗೃತಿ ಮೂಡಿಸುವ ವಿಡಿಯೋ ಸಾಂಗ್ ನಲ್ಲಿ ನಮ್ಮ ಕನ್ನಡ ಚಿತ್ರರಂಗ ಕ್ಷೇತ್ರದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಪಾಲ್ಗೊಂಡಿದ್ದಾರೆ. ಅಲ್ಲದೇ ಮಲಯಾಳಂ ನಟರಾದ ನಿವಿನ್ ಪೌಲ್, ಪೃಥ್ವಿ ರಾಜ್, ಬಾಲಿವುಡ್ ನಟ ಅಭಿಷೇಕ್ ಬಚ್ಚನ್, ತಮಿಳು ಚಿತ್ರರಂಗದ ಸ್ಟಾರ್ ಗಳು ಭಾಗವಹಿಸಿದ್ದಾರೆ.
ಎಸ್.ಪಿ ಬಾಲಸುಬ್ರಮಣ್ಯಂ, ಶಂಕರ್ ಮಹದೇವನ್, ವಿಜಯ್ ಯೇಸುದಾಸ್ ಮುಂತಾದವರು ಈ ಹಾಡಿಗೆ ಧ್ವನಿಯಾಗಿದ್ದಾರೆ. ಆಲ್ಬಂ ವಿಡಿಯೋ ಸಾಂಗ್ ನ ಶೂಟಿಂಗ್ ಸ್ಟಿಲ್ಸ್ ನೋಡಿ ಕೆಳಗಿನ ಸ್ಲೈಡ್ಸ್ ಗಳಲ್ಲಿ...