Don't Miss!
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- News ಈ ಎರಡು ಕ್ಷೇತ್ರಗಳಲ್ಲಿ ಕಾಡುಗೊಲ್ಲರ ಮತ ಪಡೆಯಲು ಕೈ, ಕಮಲ ಪ್ಲಾನ್ ಏನು?-ಇಲ್ಲಿದೆ ಮಾಹಿತಿ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಷ್ಟಕ್ಕೂ ದುನಿಯಾ ವಿಜಯ್ ಏನು ಹೇಳುತ್ತಾರೆ?
ನಟ ದುನಿಯಾ ವಿಜಯ್ ತಮ್ಮ ದಾಂಪತ್ಯ ಜೀವನದ ಇಕ್ಕಟ್ಟು ಬಿಕ್ಕಟ್ಟುಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಪತ್ನಿ ನಾಗರತ್ನ ಅವರೊಂದಿಗೆ ವಿವಾಹ ವಿಚ್ಛೇದನ ಕೋರಿ ಅವರು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಅವರು ಮಾತನಾಡುತ್ತಾ...
ನನಗಾಗಿರುವ
ನೋವು
ಇನ್ಯಾರಿಗೂ
ಆಗಬಾರದು.
ನನ್ನ
ತಾಯಿ
ನನಗೆ
ಮುಖ್ಯ.
ಎರಡು
ವರ್ಷಗಳ
ಹಿಂದೆ
ನನ್ನ
ತಾಯಿ
ಇನ್ನೇನು
ಸಾಯುವ
ಹಂತಕ್ಕೆ
ಹೋಗಿದ್ದರು.
ಆಗ
ಈ
ಸೊಸೆ
ಅನ್ನಿಸಿಕೊಂಡವರು
ಎಲ್ಲಿ
ಹೋಗಿದ್ದರು.
ಆಕೆ ಮಾಡಿರುವ ಆರೋಪಗಳೆಲ್ಲಾ ಸುಳ್ಳು
ನಾನೀಗ ನ್ಯಾಯಾಲಯದ ಮೊರೆ ಹೋಗಿದ್ದೇನೆ. ನನಗೆ ನ್ಯಾಯ ಬೇಕು ಅಷ್ಟೇ. ಹೆತ್ತ ತಾಯಿಯನ್ನೇ ಬೀದಿ ಭಿಕಾರಿ ತರಹ ನೋಡಿದ್ದಾರೆ. ನನ್ನ ಪತ್ನಿ ಮಾಡಿರುವ ಆರೋಪಗಳೆಲ್ಲಾ ಸತ್ಯಕ್ಕೆ ದೂರವಾಗಿವೆ. ನನಗೆ ಸುಳ್ಳು ಹೇಳಲಿಕ್ಕೆ ಬರಲ್ಲ. ಆಕೆ ಮಾಡಿರುವ ಆರೋಪಗಳೆಲ್ಲಾ ಸುಳ್ಳು.
ನನಗೆ ನನ್ನ ತಾಯಿ, ಅಕ್ಕ ಬೇಕು
ನನ್ನ ತಾಯಿ ಜೊತೆ ಬದುಕುತ್ತೇನೆ. ನನ್ನ ತಾಯಿ ಸಾಯುವ ಸ್ಥಿತಿಯಲ್ಲಿದ್ದರು. ಪತ್ನಿ ನೋಡಿಕೊಳ್ಳಲಿಲ್ಲ. ನನ್ನ ತಾಯಿ ಮುಖ್ಯ. ಪತ್ನಿ ಯಾವ ಆರೋಪವನ್ನಾದರೂ ಮಾಡಲಿ. ನಾನು ಸತ್ಯ, ನನ್ನ ತಾಯಿ ಸತ್ಯ. ನನಗೆ ನನ್ನ ತಾಯಿ, ಅಕ್ಕ ಬೇಕು. ಮಾನಸಿಕ ಕಿರುಕುಳವಾಗಿದೆ.
ಬಲವಂತವಾಗಿ ಯಾರೂ ಸಂಸಾರ ಮಾಡಕ್ಕಾಗಲ್ಲ
ಆಕೆಗೆ ನೀನು ಚೆನ್ನಾಗಿರು. ನಾನು ಚೆನ್ನಾಗಿರುತ್ತೇನೆ ಎಂದು ಹೇಳುತ್ತೇನೆ. ನಾನು ಯಾರಿಗೂ ಮೋಸ ಮಾಡಿಲ್ಲ. ನನ್ನ ತಾಯಿಯನ್ನು ನಿನ್ನ ತಾಯಿ ಎಂದು ನೋಡು. ನಾನು ದುಡುಕಿ ನಿರ್ಧಾರ ತೆಗೆದುಕೊಂಡಿಲ್ಲ. ಪತ್ನಿಗೆ ಕಿರುಕುಳ ನೀಡಿಲ್ಲ. ಬಲವಂತವಾಗಿ ಯಾರೂ ಸಂಸಾರ ಮಾಡಕ್ಕಾಗಲ್ಲ.
ತಾಯಿಗಾಗಿ ನನ್ನ ಜೀವನ ಮೀಸಲು
ಈಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಯಾವಾಗ ಸಿಗುತ್ತದೋ ಆವಾಗ ಸಿಗಲಿ. ಸಾಯೋವರೆಗೂ ಕಾಯುತ್ತೇನೆ. ನನ್ನ ಹೆತ್ತ ತಂದೆ ತಾಯಿಗೆ ಮೋಸವಾಗಿದೆ. ಹಾಗಾಗಿ ನಾನು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಮಕ್ಕಳು ನನ್ನೊಂದಿಗೆ ಇರುತ್ತಾರೆ. ದಯವಿಟ್ಟು ಅವರನ್ನು ಈ ಗಲಾಟೆಯಲ್ಲಿ ಎಳೆಯಬೇಡಿ. ತಾಯಿಗಾಗಿ ನನ್ನ ಜೀವನ ಮೀಸಲು ಎಂದಿದ್ದಾರೆ.
ವಿಜಿ ತಂದೆ ರುದ್ರಯ್ಯ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಏತನ್ಮಧ್ಯೆ ದುನಿಯಾ ವಿಜಿ ತಂದೆ ರುದ್ರಯ್ಯ ಅವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೆಕ್ಷನ್ 13 (1A) ಅಡಿ ಅರ್ಜಿ ಸಲ್ಲಿಸಲಾಗಿದೆ. ವಕೀಲರಾದ ಸುಭಾಷ್ ಅವರು ದುನಿಯಾ ವಿಜಯ್ ಪರ ವಕೀಲರು. ಈ ನಡುವೆ ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ (ಜ.20) ಇನ್ನೇನು ಕೆಲವೇ ದಿನಗಳು ಬಾಕಿ ಇವೆ.