Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದ ವೇಳೆ ದರ್ಶನ್ ಕಾರು ಚಲಾಯಿಸುತ್ತಿದ್ದ ರಾಯ್ ಅಂಟೋನಿ ಯಾರು.?
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ನಿನ್ನೆ ರಾತ್ರಿ ಕಾರು ಅಪಘಾತದ ವೇಳೆ ದರ್ಶನ್ ಗನ್ ಮ್ಯಾನ್ ಹಾಗೂ ಕಾರು ಚಾಲಕ ರಾಯ್ ಆಂಟೋನಿ ಕೂಡ ಜೊತೆ ಇದ್ದರು. ಇದರೊಟ್ಟಿಗೆ ಕಾರು ಚಲಾಯಿಸುತ್ತಿದ್ದದ್ದು ಇದೇ ಆಂಟೋನಿ ಎಂದು ಬಲ್ಲ ಮೂಲಗಳಿಂದ ಲಭ್ಯವಾಗಿದೆ.
ರಾಯ್ ಆಂಟೋನಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಎಂದು ಹೇಳಲಾಗಿದೆ. ನಟ ದರ್ಶನ್ ಕಾರು ಸಂಖ್ಯೆ JA 51 JD 79999 ಆರ್ಡಿ ಕ್ಯೂ 7 ಅಪಘಾತವಾದ ಕಾರ್. ಅಪಘಾತದ ಬಳಿಕ ಕಾರನ್ನು ಬೆಂಗಳೂರಿಗೆ ರಾತ್ರೋರಾತ್ರಿ ಶಿಫ್ಟ್ ಮಾಡಲಾಗಿತ್ತು.
ಸದ್ಯ ಈ ಕಾರನ್ನು ಮೈಸೂರು ಪೊಲೀಸರು ವಿಚಾರಣೆಗಾಗಿ ಬೆಂಗಳೂರಿನಿಂದ ವಾಪಸ್ ತರಿಸಲು ಸಜ್ಜಾಗಿದ್ದಾರೆ. ಆಸ್ಪತ್ರೆ ಬಳಿ ವಿವಿ ಪುರಂ ಸಂಚಾರಿ ಠಾಣೆ ಇನ್ಸ್ಪೆಕ್ಟರ್ ರವಿಯಿಂದ ವಿಚಾರಣೆ ನಡೆಯುತ್ತಿದೆ.
ಊಹಾಪೋಹಗಳನ್ನು ಬಿಡಿ : ದರ್ಶನ್ ರನ್ನ ಕಣ್ಣಾರೆ ಕಂಡ ಸಂದೇಶ್ ನಾಗರಾಜ್ ಹೇಳಿದಿಷ್ಟು!
ಇನ್ನು ಮತ್ತೊಂದೆಡೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಉಪೇಂದ್ರ ಶೆಣೈ ತಿಳಿಸಿದ್ದಾರೆ.
ದರ್ಶನ್ ಅಪಘಾತದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ನೀಡಿದ ಪ್ರತಿಕ್ರಿಯೆ
''ದರ್ಶನ್ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು 25 ಹೊಲಿಗೆ ಹಾಕಲಾಗಿದೆ. ಅವರ ಮುಂಗೈ ಮುರಿದಿದೆ. ಅದಕ್ಕೆ ಪ್ಲೇಟ್ ಹಾಕಿದ್ದೇವೆ. ಸದ್ಯ ಆಸ್ಪತ್ರೆಯಲ್ಲಿಯೇ ಇರುತ್ತಾರೆ. ಸಾಧ್ಯವಾದರೇ ಇಂದು ವಾರ್ಡ್ ಗೆ ಶಿಫ್ಟ ಮಾಡಲಾಗುವುದು. 24 ರಿಂದ 48 ಗಂಟೆಯವರೆಗೂ ಆಸ್ಪತ್ರೆಯಲ್ಲಿಯೇ ಪರಿಶೀಲನೆಯಲ್ಲಿ ಇರಿಸಲಾಗುತ್ತದೆ. ಇಬ್ಬರು ನುರಿತ ವೈದ್ಯರಿಂದ ಸೂಕ್ತ ಚಿಕಿತ್ಸೆ ನಡೆಸಲಾಗುತ್ತಿದೆ. ಇಂದು ಮಧ್ಯಾಹ್ನದ ವೇಳೆಗೆ ವಾರ್ಡ್ ಗೆ ಶಿಪ್ಟ್ ಮಾಡಲಾಗುವುದು'' ಎಂದರು.