Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರುಣಾ ಕುಮಾರಿ ವೃತ್ತಾಂತ ಬಿಚ್ಚಿಟ್ಟ ನಾಗವರ್ಧನ್ ಯಾರು?
ಅರುಣಾ ಕುಮಾರಿ ವಂಚನೆ ಪ್ರಕರಣಕ್ಕೆ ಬೆಂಗಳೂರು ಮೂಲದ ಉದ್ಯಮಿ ನಾಗವರ್ಧನ್ ಟ್ವಿಸ್ಟ್ ಕೊಟ್ಟಿದ್ದಾರೆ. ನಟ ದರ್ಶನ್, ದರ್ಶನ್ ಆಪ್ತರು ಹಾಗೂ ರಾಬರ್ಟ್ ನಿರ್ಮಾಪಕ ಉಮಾಪತಿ ಹೆಸರನ್ನು ದುರ್ಬಳಕೆ ಮಾಡಿಕೊಂಡು 25 ಕೋಟಿ ರೂಪಾಯಿ ವಂಚಿಸಲು ಅರುಣಾ ಕುಮಾರಿ ಎನ್ನುವ ಮಹಿಳೆ ಪ್ರಯತ್ನಿಸಿದ್ದ ಘಟನೆ ಕಳೆದ ಎರಡು ದಿನದಿಂದ ಭಾರಿ ಕೋಲಾಹಲ ಸೃಷ್ಟಿಸಿದೆ.
Recommended Video
ಈ ವಿಚಾರಕ್ಕೆ ಈಗ ಉದ್ಯಮಿಯೊಬ್ಬರು ಎಂಟ್ರಿಯಾಗಿದ್ದು ಅರುಣಾ ಕುಮಾರಿ ಈ ಮೊದಲು ಸಹ ಇಂತಹ ವಂಚನೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯ ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ, ಅರುಣಾ ಕುಮಾರಿಯಿಂದ ಈ ಹಿಂದೆ ವಂಚನೆಗೆ ಒಳಗಾಗಿದ್ದ ನಾಗವರ್ಧನ್ ಯಾರು? ಅವರ ಹಿನ್ನೆಲೆ ಏನು? ಮುಂದೆ ಓದಿ....
ದರ್ಶನ್-ಉಮಾಪತಿ ಪ್ರಕರಣದ 'ಲೇಡಿ'ಯ ಮತ್ತೊಂದು 'ದೋಖಾ' ಬಯಲು
ಉದ್ಯಮಿ ನಾಗವರ್ಧನ್
ಅರುಣಾ ಕುಮಾರಿ ಎನ್ನುವ ಮಹಿಳೆ ಈ ಮೊದಲು ನಂದಿತಾ ಹೆಸರಿನಲ್ಲಿ ನಾಗವರ್ಧನ್ಗೆ ಪರಿಚಯ ಆಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾರೆ ಎಂದು ದೂರಿದ್ದಾರೆ. ನಾಗವರ್ಧನ್ ಉದ್ಯಮಿ ಎಂದು ಹೇಳಲಾಗುತ್ತಿದೆ. ಗೀತರಚನೆಕಾರ ನಾಗೇಂದ್ರ ಪ್ರಸಾದ್ ಅವರ ಸ್ನೇಹಿತ ಸಹ ಹೌದು. ಇವರಿಬ್ಬರ ನಡುವೆ ಬಹಳ ವರ್ಷದ ಪರಿಚಯ ಇತ್ತು. ಅರುಣಾ ಕುಮಾರಿಯಿಂದಲೇ ಇವರಿಬ್ಬರ ಸ್ನೇಹದಲ್ಲಿ ಬಿರುಕು ಮೂಡಿತ್ತು ಎನ್ನುವ ವಿಚಾರವನ್ನು ಸ್ವತಃ ನಾಗವರ್ಧನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಕಾರ್ಯಕರ್ತ
ನಟ ವಿಷ್ಣುವರ್ಧನ್ ಅಭಿಮಾನಿ ಸಂಘದಲ್ಲಿ ಸಕ್ರಿಯನಾಗಿದ್ದ ನಾಗವರ್ಧನ್ ಕೆಲ ವರ್ಷಗಳಿಂದ ಸಕ್ರಿಯ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿರುವ ನಾಗವರ್ಧನ್, ಕುಮಾರಸ್ವಾಮಿ, ನಿಖಿಲ್ ಕುಮಾರ್ ಜೊತೆಗಿನ ಫೋಟೋಗಳನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಯಾರಿದು ದರ್ಶನ್ ಗೆಳೆಯ ರಾಕೇಶ್ ಪಾಪಣ್ಣ ಮತ್ತು ಹರ್ಷ ಮೆಲಂತಾ?
ಚಿತ್ರಗಳಲ್ಲೂ ನಟಿಸಿರುವ ಬಗ್ಗೆ ಮಾಹಿತಿ
'ಕೋಟೆ ಹೈದ' ಸಿನಿಮಾದ ಮುಹೂರ್ತದಲ್ಲಿ ನಾಗವರ್ಧನ್ ಪಾಲ್ಗೊಂಡಿದ್ದರು. ಸಿನಿಮಾ ಇಂಡಸ್ಟ್ರಿಯ ಜೊತೆ ಸಂಬಂಧ ಹೊಂದಿರುವ ನಾಗವರ್ಧನ್ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ನಿಖರವಾಗಿ ಯಾವ ಸಿನಿಮಾಗಳು ಎಂದು ತಿಳಿದು ಬಂದಿಲ್ಲ. ಫೇಸ್ ಬುಕ್ ಪ್ರೊಫೈಲ್ ನಲ್ಲಿ ಆಕ್ಟರ್ ಅಂತ ಬರೆದುಕೊಂಡಿದ್ದಾರೆ.
ಸಿನಿಮಾ ಹೆಸರಿನಲ್ಲಿ ವಂಚನೆ
ಸಿನಿಮಾ ಹೀರೋ ಆಗ್ಬೇಕು ಎಂಬ ಆಸೆ ಹೊಂದಿದ್ದ ನಾಗವರ್ಧನ್ಗೆ ಅರುಣಾ ಕುಮಾರಿ ಸಿನಿಮಾ ಮಾಡ್ತೇನೆ ಎಂದು ಹೇಳಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಚಿತ್ರದ ಮುಹೂರ್ತಕ್ಕೆ ಆಹ್ವಾನ ಪತ್ರಿಕೆಯೂ ಸಿದ್ದಪಡಿಸಲಾಗಿತ್ತಂತೆ. ಕೊನೆ ಘಳಿಗೆಯಲ್ಲಿ ಮುಹೂರ್ತ ರದ್ದಾಯಿತು ಎಂದು ನಾಗವರ್ಧನ್ಗೆ ಮಹಿಳೆ ಹೇಳಿದ್ದರಂತೆ.