Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್ ಪ್ರತ್ಯಂಗಿರಾ ಹೋಮ ಮಾಡಿಸಿದ್ದೇಕೆ?
ನಟ ದುನಿಯಾ ವಿಜಯ್ ಅವರು ಮಂಗಳವಾರ (ಆ.7) ಮಾಗಡಿ ರಸ್ತೆಯ ಅಂಗಾಳ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರತ್ಯಂಗಿರಾ ಹೋಮವನ್ನು ಮಾಡಿಸಿದ್ದಾರೆ. ಈ ಹೋಮ ಮಾಡಿಸಲು ಕಾರಣ ಏನು ಎಂಬ ಪ್ರಶ್ನೆಗೆ ಅವರೇ ಒಂದಷ್ಟು ವಿವರಗಳನ್ನೂ ನೀಡಿದ್ದಾರೆ.
ಒಬ್ಬ ಮನುಷ್ಯ ಎತ್ತರಕ್ಕೆ ಬೆಳೆದಂತೆಲ್ಲಾ ಅವನಿಗೆ ಶತ್ರುಗಳೂ ಹೆಚ್ಚಾಗುತ್ತಾರೆ. ತಾವು ಈ ಹೋಮವನ್ನು ನನಗೂ ಒಳ್ಳೆಯದಾಗಲಿ ಹಾಗೆಯೇ ನನ್ನ ಶತ್ರುಗಳಿಗೂ ಒಳ್ಳೆಯದಾಗಲಿ ಎಂದು ಮಾಡಿಸುತ್ತಿದ್ದೇನೆ ಎಂದಿದ್ದಾರೆ. ಭೀಮನ ಅಮಾವಾಸ್ಯೆ ದಿನ ಸಂಜೆ 6ಕ್ಕೆ ಆರಂಭವಾದ ಹೋಮ ರಾತ್ರಿ 9 ಗಂಟೆಗೆ ಮುಗಿದಿದೆ.
ಆದರೆ ದುನಿಯಾ ವಿಜಯ್ ಮಾತ್ರ ತಾನು 'ಜಯಮ್ಮನ ಮಗ' ಚಿತ್ರದಲ್ಲಿ ಕಾಳಿ ಪಾತ್ರವನ್ನು ಪೋಷಿಸಿದ್ದೇನೆ. ಅದಕ್ಕಾಗಿ ಶಾಂತಿ ಮಾಡಿಸಲು ಈ ಹೋಮ ಎಂದಿದ್ದಾರೆ. ಹಿರಣ್ಯಕಶಿಪುವನ್ನು ಉಗ್ರನರಸಿಂಹ ಸಂಹರಿಸಿದ ಮೇಲೆ ಆತನನ್ನು ಶಾಂತಗೊಳಿಸಲು ಶಿವನ ಮೂರನೇ ಕಣ್ಣಿನಿಂದ ಪ್ರತ್ಯಂಗಿರಾ ದೇವಿ ಹೊರಹೊಮ್ಮುತ್ತಾಳೆ.
ದುನಿಯಾ ವಿಜಯ್ ನಿರ್ಮಿಸಿ ನಟಿಸಿರುವ 'ಜಯಮ್ಮನ ಮಗ' ಚಿತ್ರದ ಸಕ್ಸಸ್ ಗಾಗಿ ಹಾಗೂ ಕುಟುಂಬ ಕಲಹಗಳಿಂದ ಧೃತಿಗೆಟ್ಟಿರುವ ವಿಜಯ್ ಈ ಹೋಮ ಮಾಡಿಸಿರಬಹುದು ಎಂಬುದು ಮೇಲ್ನೋಟಕ್ಕೆ ಗೊತ್ತಾಗುವ ಸಂಗತಿ.