Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್, ಶಿವಣ್ಣ, ಯಶ್ ಯಾಕೆ ಈ ನಿರ್ಲಕ್ಷ್ಯ? ಕಣ್ಣೀರಿಟ್ಟು ಅಂಗಲಾಚಿದ ವಿಜಯಲಕ್ಷ್ಮಿ
ನಾಗಮಂಡಲ, ಜೋಡಿಹಕ್ಕಿ, ಸೂರ್ಯವಂಶ, ಸ್ವಸ್ತಿಕ್, ಹಬ್ಬ ಅಂತಹ ಸೂಪರ್ ಹಿಟ್ ಸಿನಿಮಾಗಳ ಮೂಲಕ ಕನ್ನಡಿಗರ ಪ್ರೀತಿ ಪಡೆದುಕೊಂಡಿದ್ದ ನಟಿ ವಿಜಯಲಕ್ಷ್ಮಿ ಇಂದು ತೀರಾ ಕಷ್ಟದ ಸ್ಥಿತಿಯಲ್ಲಿದ್ದಾರೆ. ವಿಜಯಲಕ್ಷ್ಮಿ ಈ ಸ್ಥಿತಿ ನೋಡಿದ ಸಾಮಾನ್ಯ ಜನಕ್ಕೆ ನಂಬಲು ಸಾಧ್ಯವೇ ಆಗುತ್ತಿಲ್ಲ.
ಬಹಿರಂಗವಾಗಿ ತನ್ನ ಕಷ್ಟ ಹೇಳಿಕೊಳ್ಳುತ್ತಿದ್ದರೂ ಇಂಡಸ್ಟ್ರಿಯಿಂದ ಯಾರೊಬ್ಬರು ನೆರವು ನೀಡದೇ ಇರುವುದು ದುರ್ದೈವ. ಇತ್ತೀಚಿಗಷ್ಟೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ವಿಜಯಲಕ್ಷ್ಮಿ ಚಿಕಿತ್ಸೆಗೆ, ಔಷಧಿಗೂ ದುಡ್ಡಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
ಕಷ್ಟದಲ್ಲಿರುವ ನಟಿ ವಿಜಯಲಕ್ಷ್ಮಿಗೆ ನೆರವು ನೀಡಿದ ಕಿಚ್ಚ ಸುದೀಪ್
ಈಗಲೂ ಆಸ್ಪತ್ರೆಯಿಂದಲೇ ಇಂಡಸ್ಟ್ರಿಯವರನ್ನ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ. ದರ್ಶನ್, ಶಿವಣ್ಣ, ಪುನೀತ್, ಯಶ್, ರಾಘಣ್ಣ ಅಂತಹ ನಟರಿದ್ದರೂ ಯಾಕೆ ನನಗೆ ಸಹಾಯ ಮಾಡ್ತಿಲ್ಲ ಎಂದು ಅಳುತ್ತಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನ ಮಾಡಿ ಮನವಿ ಮಾಡಿರುವುದು ಈಗ ಮನ ಕುಲುಕುತ್ತಿದೆ. ಮುಂದೆ ಓದಿ.....
ಇರಲು ಮನೆ ಇಲ್ಲ
''ನನಗೆ ಇರೋದಕ್ಕೆ ಮನೆ ಇಲ್ಲ. ಮನೆ ಬೇಕು ಅಂದ್ರೆ ಅಡ್ವಾನ್ಸ್ ಕೊಡೋಕೆ ಹಣ ಬೇಕು. ಅಷ್ಟು ಹಣ ಎಲ್ಲಿಂದ ಕೊಡಲಿ. ಈಗ ನಾನು ಕೆಲಸಕ್ಕೆ ಹೋಗಬೇಕಾದರೂ ನನಗೆ ಸಮಯ ಬೇಕು. ನನ್ನ ಆರೋಗ್ಯ ಸರಿಯಿಲ್ಲ. ಇಷ್ಟೆಲ್ಲಾ ಕಷ್ಟಗಳನ್ನ ನಾನಾಗೇ ಹೇಳಿಕೊಳ್ಳುತ್ತಿದ್ದರೂ ಯಾರೊಬ್ಬರು ಕೂಡ ನನ್ನ ಬಗ್ಗೆ ಕಾಳಜಿ ತೋರುತ್ತಿಲ್ಲ'' ಎಂದು ಅಂಗಲಾಚಿದ್ದಾರೆ.
ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಮುಂದಾದ ಫಿಲ್ಮ್ ಚೇಂಬರ್
ಡಾ ರಾಜ್-ಪಾರ್ವತಮ್ಮ ಇದ್ದಿದ್ರೆ ಈ ಸ್ಥಿತಿ ಬರ್ತಿರಲಿಲ್ಲ
ಇಂತಹ ಸಮಯದಲ್ಲಿ ನನಗೆ ಡಾ ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರನ್ನ ತುಂಬಾ ಮಿಸ್ ಮಾಡಿಕೊಳ್ತೀನಿ. ಅವರು ಇದ್ದಿದ್ರೆ ನನಗೆ ಇಂತಹ ಸ್ಥಿತಿ ಬರೋಕೆ ಬಿಡ್ತಿರಲಿಲ್ಲ. ಸುದೀಪ್ ಅವರು ಬಿಟ್ಟರೇ ಬೇರೆ ಯಾರೂ ನನ್ನ ಬಗ್ಗೆ ವಿಚಾರಿಸುತ್ತಿಲ್ಲ ಯಾಕೆ?
ಆಸ್ಪತ್ರೆ ಸೇರಿದ ನಟಿ ವಿಜಯಲಕ್ಷ್ಮಿ: ಚಿತ್ರರಂಗದ ಸಹಾಯ ಕೇಳಿದ ಸಹೋದರಿ
ಶಿವಣ್ಣ, ದರ್ಶನ್, ಪುನೀತ್, ಯಶ್ ಏನ್ಮಾಡ್ತಿದ್ದಾರೆ?
''ಇಂಡಸ್ಟ್ರಿಯಲ್ಲಿ ಬಹುತೇಕ ಎಲ್ಲ ಸಿನಿಮಾಗಳಲ್ಲೂ ನಟಿಸಿದ್ದೇನೆ. ಸುದೀಪ್ ಅವರು ಬಿಟ್ಟರೇ ಬೇರೆ ಯಾಕೆ ನನ್ನ ಬಗ್ಗೆ ವಿಚಾರಿಸುತ್ತಿಲ್ಲ. ಶಿವಣ್ಣ, ರಾಘಣ್ಣ, ದರ್ಶನ್, ಪುನೀತ್, ಯಶ್ ಯಾಕೆ ಸಹಾಯ ಮಾಡ್ತಿಲ್ಲ'' ಎಂದು ಕೇಳಿಕೊಂಡಿದ್ದಾರೆ.
ನಟ ಸೃಜನ್ ಲೋಕೇಶ್-ವಿಜಯಲಕ್ಷ್ಮಿ ಮದುವೆ ಮುರಿದು ಬೀಳಲು 'ಇದೇ' ಅಸಲಿ ಕಾರಣ.!
ನನ್ನನ್ನು ಒಬ್ಬಂಟಿ ಯಾಕೆ ಮಾಡಿದ್ರಿ?
''ನಾನು ಪ್ರತಿಯೊಂದು ಸಲನೂ ವಿಡಿಯೋ ಮಾಡ್ಬೇಕಾದರೇ ಅಳುತ್ತಿದ್ದೇನೆ. ಯಾರೂ ನನ್ನ ಬಗ್ಗೆ ಕೇರ್ ಮಾಡ್ತಿಲ್ಲ. ನಾನು ಅಂತಹ ತಪ್ಪು ಏನು ಮಾಡಿದ್ದೇನೆ. ಯಾಕೆ ನನ್ನ ಬಗ್ಗೆ ಇಷ್ಟು ಅಸಡ್ಡೆ ನಿಮಗೆ. ನನ್ನ ಪ್ರಶ್ನಿಗಳಿಗೆ ಉತ್ತರ ಕೊಡಿ. ನಾನು ಈಗ ಸಿನಿಮಾಗಳನ್ನ ಮಾಡೋದಕ್ಕೂ ಆಗಲ್ಲ. ನನಗೆ ವಿಶ್ರಾಂತಿ ಬೇಕು. ನಾನು ಮಾನಸಿಕವಾಗಿ ನೊಂದಿದ್ದೇನೆ. ಅದರಿಂದ ಹೊರಬರಬೇಕು''
ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದು ನಿಜ.! ಕಹಿ ಅಧ್ಯಾಯ ಇಲ್ಲಿದೆ...
ಒಂದು ಲಕ್ಷ ಸಹಾಯ ಮಾಡಿದ ಸುದೀಪ್
ವಿಜಯಲಕ್ಷ್ಮಿ ಅವರು ಆಸ್ಪತ್ರೆಯಲ್ಲಿದ್ದಾರೆ ಎಂಬ ಸುದ್ದಿ ತಿಳಿದ ಕಿಚ್ಚ ಸುದೀಪ್, ಒಂದು ಲಕ್ಷ ಧನ ಸಹಾಯ ಮಾಡಿ, ಮಾನವೀಯತೆ ಮೆರೆದಿದ್ದಾರೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ವಿಜಯಲಕ್ಷ್ಮಿ, ಸುದೀಪ್ ಬಿಟ್ಟರೇ ಬೇರೆಯವರಿಗೆ ನನ್ನ ಬಗ್ಗೆ ಕಾಳಜಿ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.