Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ 'ಕನ್ವರ್ ಲಾಲ್' ಸಿನಿಮಾ ನಿಂತಿದ್ಯಾಕೆ?
ಕಿಚ್ಚ ಸುದೀಪ್ ಅವರು 'ಕನ್ವರ್ ಲಾಲ್' ಹೆಸರಿನಲ್ಲಿ ಸಿನಿಮಾ ಮಾಡಲು ಯೋಜಿಸಿದ್ದರು. ಅದಕ್ಕೆ ಬೇಕಾದ ತಯಾರಿ ಕೂಡ ನಡೆಸಿದ್ದರು. ದುರಾದೃಷ್ಟವಶಾತ್ ಆ ಪ್ರಾಜೆಕ್ಟ್ ಆರಂಭವಾಗಲಿಲ್ಲ. ಇದ್ದಕ್ಕಿದ್ದಂತೆ ಈ ಸಿನಿಮಾ ನಿಂತಿದ್ಯಾಕೆ ಎಂಬ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ಸೂಪರ್ ಹಿಟ್ 'ಅಂತ' ಚಿತ್ರದ ಕನ್ವರ್ ಲಾಲ್ ಪಾತ್ರವನ್ನಿಟ್ಟು, ಸುದೀಪ್ ಸ್ಕ್ರಿಪ್ಟ್ ಮಾಡಿದ್ದರಂತೆ. ಈ ಸಿನಿಮಾ ಮಾಡೋಣ ಎಂದು ನಿರ್ಧರಿಸಿದಾಗ ಅಲ್ಲೊಂದು ಸಮಸ್ಯೆ ಎದುರಾಯಿತಂತೆ. ಆ ಕಾರಣಕ್ಕಾಗಿ ಈ ಚಿತ್ರವನ್ನ ನಿಲ್ಲಿಸಬೇಕಾಯಿತಂತೆ. ಆದರೆ, ಆ ಸಮಸ್ಯೆ ಏನು ಎಂಬುದನ್ನ ಸುದೀಪ್ ಹೇಳಲಿಲ್ಲ.
ಅಂಬಿ ಬಯೋಪಿಕ್ ನಲ್ಲಿ ಸುದೀಪ್: ಕಿಚ್ಚ ಹೇಳಿದ್ದೇನು?
ಆ ಚಿತ್ರಕ್ಕೆ ಬಂಡವಾಳ ಹಾಕಿದ್ದ ನಿರ್ಮಾಪಕರಿಗೆ ಮೋಸ ಆಗಬಾರದು ಎಂಬ ಕಾರಣಕ್ಕೆ, ಸೂರಪ್ಪಬಾಬು ಅವರ ಬಳಿಯಿದ್ದ 'ಸಿಂಗಂ' ಚಿತ್ರದ ಹಕ್ಕನ್ನು ಖರೀದಿ ಮಾಡಿ, ಕೆಂಪೇಗೌಡ ಸಿನಿಮಾ ಮಾಡಲಾಯಿತಂತೆ.
ಬಿಗ್ ಬಾಸ್ ಸಂಭಾವನೆ ಬಗ್ಗೆ ಕೇಳಿದ್ದಕ್ಕೆ ಸುದೀಪ್ ಏನಂದ್ರು?
ಕನ್ವರ್ ಲಾಲ್ ಚಿತ್ರಕ್ಕೆ ಸ್ವತಃ ಸುದೀಪ್ ಚಿತ್ರಕಥೆ ಬರೆದಿದ್ದರು. ಬಹುಶಃ ಆ ಸ್ಕ್ರಿಪ್ಟ್ ಇನ್ನು ಸುದೀಪ್ ಅವರ ಬಳಿಯೇ ಉಳಿಸಿಕೊಂಡಿರಬೇಕು. ಕಿಚ್ಚನ ಮನಸ್ಸು ಮಾಡಿದ್ರೆ ಮತ್ತೆ ಈ ಚಿತ್ರಕ್ಕೆ ಜೀವ ನೀಡಬಹುದು.
ಸದ್ಯ ಸುದೀಪ್ ಅವರು ನಿರ್ದೇಶನ ಮಾಡುವ ಕಡೆ ಒಲವು ಹೊಂದಿಲ್ಲ. ಯಾಕಂದ್ರೆ, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಇರುವ ಕಾರಣ, ಬೇರೆ ನಿರ್ದೇಶಕರಿಗೆ ಕಾಲ್ ಶೀಟ್ ಕೊಡಬೇಕಿರುವ ಒತ್ತಡದಲ್ಲಿದ್ದಾರೆ. ಕೋಟಿಗೊಬ್ಬ 3 ಸಿನಿಮಾ ಇನ್ನು ಮುಗಿದಿಲ್ಲ. ಅದಾದ ಬಳಿಕ ಅನೂಪ್ ಭಂಡಾರಿ ಜೊತೆ ಸಿನಿಮಾ ಆರಂಭಿಸಬೇಕಿದೆ.