Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ಟರ್ ಪೀಸ್' ಹಿಟ್ ಆದ್ರೂ ಮಂಜು ಮಾಂಡವ್ಯ 4 ವರ್ಷ ಸಿನಿಮಾ ಮಾಡಲಿಲ್ಲ ಏಕೆ?
ನಿರ್ದೇಶಕ ಮಂಜು ಮಾಂಡವ್ಯ 'ಮಾಸ್ಟರ್ ಪೀಸ್' ನಂತಹ ಹಿಟ್ ಸಿನಿಮಾ ನೀಡಿದ್ದರು. ಯಶ್ ರೊಂದಿಗೆ ಮಾಡಿದ ಈ ಸಿನಿಮಾದ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಗಳಿಕೆ ಮಾಡಿತ್ತು. ಆದರೂ ಈ ಸಿನಿಮಾದ ನಂತರ 4 ವರ್ಷ ಅವರ ಬೇರೆ ಯಾವ ಸಿನಿಮಾವೂ ಶುರು ಆಗಲಿಲ್ಲ.
ಹೀಗಾಗಿ ಮಂಜು ಮಾಂಡವ್ಯಗೆ 'ಮಾಸ್ಟರ್ ಪೀಸ್' ನಂತರ ಅವಕಾಶಗಳು ಸಿಗಲಿಲ್ಲ ಎನ್ನುವ ಮಾತು ಇತ್ತು. ಆದರೆ, ಈ ಬಗ್ಗೆ ಸ್ವತಃ ಮಂಜು ಮಾಂಡವ್ಯ ಸ್ಪಷ್ಟನೆ ನೀಡಿದ್ದಾರೆ. 'ಶ್ರೀ ಭರತ ಬಾಹುಬಲಿ' ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮದಲ್ಲಿ ಈ ಸಂಗತಿ ಹಂಚಿಕೊಂಡಿದ್ದಾರೆ.
'ಮಾಸ್ಟರ್ ಪೀಸ್'ಗೆ ವಿಜಯ ಕಿರಗಂದೂರು ನಿರ್ಮಾಪಕರಾಗಿದ್ದರು. ಸಿನಿಮಾ ಬಗ್ಗೆ ಪ್ರೀತಿ ಇದ್ದ ಅವರು ಏನು ಕೇಳಿದರೂ ನೀಡುತ್ತಿದ್ದರು. ಆ ಚಿತ್ರದ ನಂತರ ನಾನು ಅದೇ ರೀತಿಯ ನಿರ್ಮಾಪಕರನ್ನು ನೋಡುತ್ತಿದ್ದೆ. ಆದರೆ, ನನ್ನ ಬಳಿ ಬರುವ ನಿರ್ಮಾಪಕರನ್ನು ಗಮನಿಸಿದರೆ, ಸಿನಿಮಾ ಮಾಡುವ ನಂಬಿಕೆ ಬರಲಿಲ್ಲ.
''ಮೈ ತುಂಬ ಚಿನ್ನ ಹಾಕಿಕೊಂಡು ಬರುತ್ತಿದ್ದರು. ಈ ಕಾರ್ ನಿಮ್ಮದೆ ಎನ್ನುತ್ತಿದ್ದರೂ ನನಗೆ ಅದನ್ನು ನೋಡಿದಾಗ ಇವರು ಸಿನಿಮಾ ಮಾಡಲು ಬಂದಿದ್ದಾರೆಯೇ ಎನ್ನುವ ಅನುಮಾನ ಮೂಡುತ್ತಿತ್ತು. ಹಾಗಾಗಿ, ನನ್ನ ಸಿನಿಮಾ ತಡ ಆಯಿತು.'' ಎಂದು ಮಂಜು ಹೇಳಿದ್ದಾರೆ.
ಅದರೊಂದಿಗೆ, ಉಪೇಂದ್ರರಿಗೆ ಒಂದು ಸಿನಿಮಾ ಮಾಡುವ ಪ್ಲಾನ್ ಇತ್ತು. ಆದರೆ, ನೋಟ್ ಬ್ಯಾನ್ ನಿಂದ ಆ ಸಿನಿಮಾ ನಿಂತು ಹೋಯ್ತು. ಈ ಕಾರಣಗಳಿಂದ ನಾನು 4 ವರ್ಷ ಸಿನಿಮಾ ಮಾಡಲಿಲ್ಲ ಎಂದು ಮಂಜು ಮಾಂಡವ್ಯ ತಿಳಿಸಿದ್ದಾರೆ.
'ಶ್ರೀ ಭರತ ಬಾಹುಬಲಿ' ಮಂಜು ಮಾಂಡವ್ಯ ನಿರ್ದೇಶನದ ಹಾಗೂ ನಟನೆಯ ಸಿನಿಮಾವಾಗಿದೆ. ಈ ಸಿನಿಮಾ ಜನವರಿ 17 ರಂದು ಬಿಡುಗಡೆ ಆಗಲಿದೆ.