Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾರಂಗದ ರಾಜಕೀಯ: ರಕ್ಷಿತ್ ಶೆಟ್ಟಿಗೆ ಆಫರ್ ಬರಲ್ಲ ಯಾಕೆ?
ನಟ ರಕ್ಷಿತ್ ಶೆಟ್ಟಿ ಸದ್ಯ 777 ಚಾರ್ಲಿ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಾರ್ಲಿ ಟ್ರೈಲರ್ ಕೂಡ ರಿಲೀಸ್ ಆಗಿದ್ದು, ಭಾರಿ ಪ್ರಶಂಸೆ ಪಡೆದುಕೊಂಡಿದೆ. ಇನ್ನು ಸಿನಿಮಾ ರಿಲೀಸ್ ಗೆ ಸಜ್ಜಾಗಿದ್ದು, ಜೂನ್ 10ರಂದು ಸಿನಿಮಾ ಗ್ರ್ಯಾಂಡ್ ಎಂಟ್ರಿ ಕೊಡಲಿದೆ.
ರಕ್ಷಿತ್ ಶೆಟ್ಟಿ ಉತ್ತಮ ನಟ. ಅಭಿನಯದಲ್ಲಿ ಸೈ ಎನಿಸಿಕೊಂಡಿದ್ದಾರೆ. ಆದರೆ ಅವರ ಸಿನಿಮಾ ಜರ್ನಿಯನ್ನು ನೋಡಿದರೆ, ಅವರ ಸಿನಿಮಾಗಳನ್ನು ಅವರೇ ನಿರ್ಮಿಸಿ, ನಿರ್ಮಾಣ ಮಾಡಿದ್ದು ಹೆಚ್ಚು. ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ, ಕಿರಿಕ್ ಪಾರ್ಟಿ ನಂತರ ರಕ್ಷಿತ್ ಶೆಟ್ಟಿ ಲಕ್ ಬದಲಾಯಿತು. ಈ ಚಿತ್ರದ ನಂತರ ರಕ್ಷಿತ್ ಸ್ಟಾರ್ ಹೀರೋ ರೀತಿ ಸಿನಿಮಾರಂಗದಲ್ಲಿ ಮಿಂಚಿದರು. ಇನ್ನು 'ಅವನೇ ಶ್ರೀಮನ್ನಾರಾಯಣ' ಸೇರಿದಂತೆ ಹಲವು ಸಿನಿಮಾಗಳಲ್ಲಿ ರಕ್ಷಿತ್ ಶೆಟ್ಟಿ ನಟಿಸಿದ್ದಾರೆ.
'777 ಚಾರ್ಲಿ'ಯ ಪ್ಯಾನ್ ಇಂಡಿಯಾ ಟ್ರೈಲರ್ ರಿಲೀಸ್: ರಕ್ಷಿತ್ ಹಾಗೂ ಚಾರ್ಲಿ ಕಥೆಯೇನು?
ಈಗ ರಕ್ಷಿತ್ ಶೆಟ್ಟಿ ಬಗ್ಗೆ ಮಾತನಾಡಲು ಎರಡು ಕಾರಣ ಇವೆ. ಒಂದು ರಕ್ಷಿತ್ ಅಭಿನಯದ ಮುಂದಿನ ಸಿನಿಮಾ '777 ಚಾರ್ಲಿ' ರಿಲೀಸ್ ಗೆ ರೆಡಿಯಾಗಿದೆ. ಇನ್ನೊಂದು ರಕ್ಷಿತ್ ಶೆಟ್ಟಿ ಸಿನಿಮಾರಂಗದಲ್ಲಿ ಅವರಿಗೆ ಸಿಗುವ ಅವಕಾಶಗಳ ಬಗ್ಗೆ ಮಾತನಾಡಿದ್ದು.
ನಟ ರಕ್ಷಿತ್ ಶೆಟ್ಟಿಗೆ ಬೇರೆ ಯಾರೂ ಆಫರ್ ಮಾಡುತ್ತಿಲ್ಲವಂತೆ. ಅಂದರೆ, ಬೇರೆ ನಿರ್ಮಾಪಕರು ರಕ್ಷಿತ್ ಶೆಟ್ಟಿ ಸಿನಿಮಾಗೆ ದುಡ್ಡು ಹಾಕಿ ನಿರ್ಮಾಣ ಮಾಡುವುದಿಲ್ಲ ಎಂದು ಎಂದು ಹೇಳಿಕೊಂಡಿದ್ದಾರೆ. ಇದನ್ನು ಸುದ್ದಿಗೋಷ್ಠಿಯಲ್ಲಿ ಪರೋಕ್ಷವಾಗಿ ಹೇಳಿಕೊಂಡಿದ್ದಾರೆ. 'ನನಗೆ ಬೇರೆ ಸಿನಿಮಾದ ಆಫರ್ ಬಂದಿಲ್ಲ. ನನ್ನ ಸಿನಿಮಾ ನಾನೇ ಮಾಡಬೇಕು' ಎಂದಿದ್ದಾರೆ. ಈ ಮೂಲಕ ರಕ್ಷಿತ್ ಶೆಟ್ಟಿ ಸಿನಿಮಾರಂಗದ ಒಳಗೆ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಹೇಳಿದಂತಿದೆ.
5 ಭಾಷೆಗಳಲ್ಲಿ ರಿಲೀಸ್ ಆಗಲಿದೆ '777 ಚಾರ್ಲಿ' ಸಿನಿಮಾದ ಟ್ರೈಲರ್
ಅದೇನೇ ಇದ್ರು, ಸದ್ಯ '777 ಚಾರ್ಲಿ' ಸಿನಿಮಾ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಲು ರಕ್ಷಿತ್ ಸಜ್ಜಾಗಿದ್ದಾರೆ. ಜೂನ್ 10 ರಂದು ಕನ್ನಡ, ತೆಲುಗು, ಹಿಂದಿ, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಪರಮಂವ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣಗೊಂಡಿದೆ. ಕಿರಣ್ ರಾಜ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಹಲವು ಕಲಾವಿದರು ನಟಿಸಿದ್ದಾರೆ. ತಮಿಳಿನ ಬಾಬಿ ಸಿಂಹ, ಶಾರ್ವರಿ, ರಾಜ್ ಬಿ ಶೆಟ್ಟಿ, ದಾನೀಶ್ ಸೇಠ್, ಸಂಗೀತ ಶೃಂಗೇರಿ ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ನೋಬಿನ್ ಪೌಲ್ ಸಂಗೀತ ನೀಡಿದ್ದಾರೆ.