Don't Miss!
- Sports RR vs MI IPL 2024: ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ; ರಾಜಸ್ಥಾನ್ ವಿರುದ್ಧ ಮುಂಬೈ ಇಂಡಿಯನ್ಸ್ಗೆ ಮುಖಭಂಗ
- News Bengaluru Real Estate: ಬೆಂಗಳೂರಿನಲ್ಲಿ ಸೈಟು ಖರೀದಿಸುವ ಮುನ್ನ ಎಚ್ಚರ! 279 ಅಕ್ರಮ ಲೇಔಟ್ ಗುರುತಿಸಿದ ಬಿಡಿಎ
- Finance ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Automobiles ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಜನಾ-ರಾಗಿಣಿಗೆ ಗೆ ಜಾಮೀನು ತಪ್ಪಲು ಕಾರಣವೇನು? ಸಿಸಿಬಿ ವಕೀಲರ ಹೇಳಿಕೆ
ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಜಾಮೀನಿಗಾಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಜಾಮೀನು ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ಸಂಜನಾ ಗಲ್ರಾನಿ, ರಾಗಿಣಿಗೆ ಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ. ಸಂಜನಾ, ರಾಗಿಣಿ ಮಾತ್ರವಲ್ಲದೆ, ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಹಲವರಿಗೆ ಇಂದು ಜಾಮೀನು ನಿರಾಕರಿಸಲಾಗಿದೆ.
ಸಂಜನಾ, ರಾಗಿಣಿ ಹಾಗೂ ಇತರರಿಗೆ ಜಾಮೀನು ನೀಡಬಾರದೆಂದು ಹೈಕೋರ್ಟ್ನಲ್ಲಿ ಸಿಸಿನಿ ಪರ ವಾದ ಮಂಡಿಸಿದ ವಕೀಲ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದು, ಸಂಜನಾ-ರಾಗಿಣಿಗೆ ಜಾಮೀನು ಸಿಗದೇ ಇರುವುದಕ್ಕೆ ಕಾರಣವೇನು ಎಂಬುದನ್ನು ಹೇಳಿದ್ದಾರೆ.
ಹಿರಿಯ ವಕೀಲ ವೀರಣ್ಣ ತಗಡಿಯಿಂದ ವಾದ
ಆದರೆ ಸಿಸಿಬಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ವೀರಣ್ಣ ತಗಡಿ ಮಾಧ್ಯಮಗಳೊಂದಿಗೆ ಮಾತನಾಡಿ, 'ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಇನ್ನಿತರರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡಿರುವ ಬಗ್ಗೆ ಎಲೆಕ್ಟಾನಿಕ್ ಸಾಕ್ಷ್ಯಗಳಿವೆ, ಈ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡಿದರೆ ಇನ್ನಿತರೆ ಆರೋಪಿಗಳ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ ಹಾಗಾಗಿ ಜಾಮೀನು ನೀಡುವ ಬಗ್ಗೆ ವಿರೋಧಿಸಲಾಗಿತ್ತು' ಎಂದಿದ್ದಾರೆ.
ಪೊಲೀಸರು ಸಾಕಷ್ಟು ಸಾಕ್ಷ್ಯ ಒಟ್ಟು ಮಾಡಿದ್ದಾರೆ: ವಕೀಲ
'ಸಂಜನಾ ಹಾಗೂ ರಾಗಿಣಿ ಡ್ರಗ್ಸ್ ದಂಧೆಗೆ ಹಣಕಾಸು ಸಹಾಯ ಹಾಗೂ ಇನ್ನೂ ವಿವಿಧ ಮಾದರಿಯಲ್ಲಿ ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ಸಾಕ್ಷ್ಯ ಒಟ್ಟು ಮಾಡಿದ್ದಾರೆ, ಇನ್ನೂ ತನಿಖೆ ನಡೆಯಬೇಕಿರುವ ಕಾರಣ ಈ ಹಂತದಲ್ಲಿ ಜಾಮೀನು ನೀಡುವುದು ಸಮಂಜಸವಲ್ಲ' ಎಂದಿದ್ದಾರೆ ವಕೀಲ ವೀರಣ್ಣ ತಗಡಿ.
Recommended Video
ಸುಪ್ರೀಂನಲ್ಲಿ ಅರ್ಜಿ ಸಲ್ಲಿಸುತ್ತಾರೆಯೇ ನಟಿಯರು?
ಸಿಸಿಬಿ ಪೊಲೀಸರು, ಪ್ರಕರಣದ ಬಗ್ಗೆ ಚಾರ್ಜ್ಶೀಟ್ ಸಲ್ಲಿಸುವವರೆಗೆ ಸಂಜನಾ-ರಾಗಿಣಿ ಜೈಲಿನಲ್ಲಿಯೇ ಇರಬೇಕಾಗಿದೆ. ಅಥವಾ ಹೈಕೋರ್ಟ್ ತೀರ್ಪನ್ನು ಧಿಕ್ಕರಿಸಿ ಸುಪ್ರೀಂಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಹಾಕುವ ಅವಕಾಶ ನಟಿಯರಿಗಿದೆ.