Don't Miss!
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡೈಮಂಡ್ ಸ್ಟಾರ್ ಶ್ರೀನಗರ ಕಿಟ್ಟಿ ಬೇಸರಕ್ಕೆ ಕಾರಣವೇನು?
ಶ್ರೀನಗರ ಕಿಟ್ಟಿ ಸ್ಯಾಂಡಲ್ ವುಡ್ ನ ತ್ಯಾಗರಾಜ ಅಂತಾನೇ ಫೇಮಸ್. ರಮೇಶ್ ಅರವಿಂದ್ ನಂತ್ರ ಟ್ರ್ಯಾಜಿಡಿ ಎಂಡಿಂಗ್ ಸಿನಿಮಾಗಳಲ್ಲಿ ಮಿಂಚಿದ ನಟ. ಕಿಟ್ಟಿ ಸಿನಿಮಾಗಳಲ್ಲಿ ಕೊರೆಯುವ ನೋವು ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು.
'ಸಂಜು ವೆಡ್ಸ್ ಗೀತಾ' ನಂತರ ಡೈಮಂಡ್ ಸ್ಟಾರ್ ಕೂಡ ಆದ ಶ್ರೀನಗರ ಕಿಟ್ಟಿಯವರ ಯಾವ ಸಿನಿಮಾಗಳೂ ರಿಲೀಸಾಗೋ ಲಕ್ಷಣಗಳಿಲ್ಲ. ಕಿಟ್ಟಿ ಅಭಿನಯದ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳು ಮುಗ್ಗರಿಸಿವೆ.
'ಸಂಜು ವೆಡ್ಸ್ ಗೀತಾ' ನಂತರ 'ಪಾರು ವೈಫ್ ಆಫ್ ದೇವದಾಸ್', ಕಲಾಸಾಮ್ರಾಟ್ ಎಸ್ ನಾರಾಯಣ್ ನಿರ್ದೇಶನದ 'ಅಪ್ಪಯ್ಯ', ಇತ್ತೀಚೆಗೆ ಬಂದ 'ಬಹುಪರಾಕ್' ಸಿನಿಮಾಗಳಿಗೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಸದ್ಯ ಸುಬ್ರಮಣಿ, ಶಂಕ್ರ, ಗೀತಾಂಜಲಿ ಸಿನಿಮಾಗಳು ಶೂಟಿಂಗ್ ಮುಗಿಸಿವೆ.
ಆದ್ರೆ ಮಾರ್ಕೆಟ್ ನಲ್ಲಿ ಕಿಟ್ಟಿ ಹವಾ ಸ್ವಲ್ಪ ಕಡಿಮೆ ಇರುವ ಕಾರಣ ಸಿನಿಮಾ ರೆಡಿಯಾದರೂ ತೆರೆಗೆ ತರಲಾಗದಿರೋ ಸ್ಥಿತಿಯಲ್ಲಿದ್ದಾರೆ ನಿರ್ಮಾಪಕರು. ಇಂದರಿಂದಾಗಿ ಬೇಸರದಿಂದಾಗಿ ಶ್ರೀನಗರ ಕಿಟ್ಟಿ ಯಾವುದೇ ಕಾರ್ಯಕ್ರಮಗಳಿಗೆ ಬರ್ತಿಲ್ಲ ಅನ್ನೋ ಗುಲ್ಲು ಗಾಂಧಿನಗರದಲ್ಲಿ ಹರಿದಾಡ್ತಿದೆ.
ಟ್ರ್ಯಾಜಿಡಿ ಸಿನಿಮಾಗಳ ಹೀರೋ ಈಗ ಟ್ರ್ಯಾಜಿಡಿ ಸ್ಥಿತಿಯಲ್ಲಿರೋದು ಕಿಟ್ಟಿ ಅಭಿಮಾನಿಗಳಿಗೆ ಬೇಸರ ಮೂಡಿಸಿದ. ಶ್ರೀನಗರಕಿಟ್ಟಿ ಮತ್ತೆ ಫಾರಂಗೆ ಬರಲಿ. ಅವರ ಚಿತ್ರಗಳು ಹಂಡ್ರಡ್ ಡೇಸ್ ಪ್ರದರ್ಶನ ಕಾಣಲಿ ಎಂಬುದು ಅಭಿಮಾನಿಗಳ ಅಭಿಮತ.