Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಟಿ ಅಮೂಲ್ಯ ಸ್ಪರ್ಧೆ.?
Recommended Video
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದೆ. ಆಪರೇಷನ್ ಕಮಲ, ರಾಜಕೀಯದ ಹೈಡ್ರಾಮಾದ ನಡುವೆ ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಅಂಬರೀಶ್ ಗೆ ಟಿಕೆಟ್ ಕೊಡಬೇಕು ಎಂಬ ಒತ್ತಾಯ ಕೇಳಿಬರುತ್ತಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಗೋಲ್ಡನ್ ಗರ್ಲ್ ಅಮೂಲ್ಯ ಸ್ಪರ್ಧೆ ಮಾಡ್ತಾರೆ ಎಂಬ ಗುಸುಗುಸು ಆರಂಭವಾಗಿದೆ.
ಹಾಗಾದ್ರೆ, ಚುನಾವಣಾ ರಾಜಕೀಯಕ್ಕೆ ನಟಿ ಅಮೂಲ್ಯ ಧುಮುಕುತ್ತಾರಾ.? ಹೇಳಿ ಕೇಳಿ ಅಮೂಲ್ಯ ಮಾವ ರಾಜಕಾರಣದಲ್ಲಿ ಗುರುತಿಸಿಕೊಂಡವರು. ಹೀಗಾಗಿ ನಟಿ ಅಮೂಲ್ಯ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದಾರಾ.? ಈ ಪ್ರಶ್ನೆಗೆ ಉತ್ತರ ಇಲ್ಲಿದೆ. ಫೋಟೋ ಸ್ಲೈಡ್ ಗಳಲ್ಲಿ ಓದಿರಿ...
ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದ ಅಮೂಲ್ಯ ಮಾವ
ಬಿಜೆಪಿ ಪಕ್ಷದಿಂದ ಕಾರ್ಪೊರೇಟರ್ ಆಗಿದ್ದ ಅಮೂಲ್ಯ ಮಾವ ರಾಮಚಂದ್ರ ಇದೀಗ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು.
ತೆನೆ ಹೊತ್ತ ಅಮೂಲ್ಯ : ಕುಮಾರಣ್ಣನ ಪಕ್ಷ ಸೇರಿದ ಗೋಲ್ಡನ್ ಕ್ವೀನ್
ಮಾವನ ಪರವಾಗಿ ಪ್ರಚಾರ ಮಾಡಿದ್ದ ಅಮೂಲ್ಯ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾವನ ಪರವಾಗಿ ರಾಜರಾಜೇಶ್ವರಿನಗರ ಕ್ಷೇತ್ರದ ತುಂಬಾ ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ಪ್ರಚಾರ ಮಾಡಿದ್ದರು. ಆದರೆ ಚುನಾವಣೆಯಲ್ಲಿ ರಾಮಚಂದ್ರ ಸೋಲು ಅನುಭವಿಸಿದ್ದರು.
ಒಲ್ಲೆ ಎನ್ನುತ್ತಾ ರಾಜಕೀಯದಲ್ಲಿ ಮೊದಲ ಹೆಜ್ಜೆ ಇಟ್ಟೇ ಬಿಟ್ಟರು ಅಮೂಲ್ಯ
ಲೋಕಸಭಾ ಚುನಾವಣೆಯಲ್ಲಿ ಅಮೂಲ್ಯ ಸ್ಪರ್ಧೆ.?
ಇದೀಗ ಲೋಕಸಭಾ ಚುನಾವಣೆಯಲ್ಲಿ ಅಮೂಲ್ಯರನ್ನು ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ಶುರುವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ನಟಿ ಅಮೂಲ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಅಮೂಲ್ಯ ಹೇಳಿದ್ದೇನು.?
''ಸಮಾಜ ಸೇವೆ ಮಾಡಬೇಕು ಎಂಬ ಆಸೆ ಮೊದಲಿನಿಂದಲೂ ಇದೆ. ಆದರೆ ರಾಜಕೀಯದಿಂದಲೇ ಸಮಾಜಸೇವೆ ಮಾಡಬೇಕು ಎಂಬುದೇನಿಲ್ಲ. ರಾಜಕೀಯ ಪ್ರವೇಶದ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ತಿಳಿಸುವೆ'' ಎಂದಿದ್ದಾರೆ ನಟಿ ಅಮೂಲ್ಯ.