Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಟ್ಟೂರು ಮಂಡ್ಯದಲ್ಲಿ ನಡೆಯುತ್ತಾ ಅಂಬರೀಶ್ ಅಂತ್ಯಕ್ರಿಯೆ.?
ರೆಬೆಲ್ ಸ್ಟಾರ್ ಅಂಬರೀಶ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ನಿನ್ನೆ (ನವೆಂಬರ್ 24) ವಿಕ್ರಂ ಆಸ್ಪತ್ರೆಗೆ ದಾಖಲಾದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ, ಹೃದಯಾಘಾತದಿಂದ ಅಂಬರೀಶ್ ಇಹಲೋಕ ತ್ಯಜಿಸಿದರು.
ಸದ್ಯಕ್ಕೆ ವಿಕ್ರಂ ಆಸ್ಪತ್ರೆಯಲ್ಲಿ ಇರುವ ಅಂಬರೀಶ್ ಪಾರ್ಥೀವ ಶರೀರ ಇನ್ನೂ ಕೆಲವೇ ಹೊತ್ತಿನಲ್ಲಿ ಅವರ ನಿವಾಸ ತಲುಪಲಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಕಂಠೀರವ ಸ್ಟೇಡಿಯಮ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
ಮಂಡ್ಯದ ಗಂಡು, ಕರುನಾಡ ಕರ್ಣ, ಸ್ಯಾಂಡಲ್ ವುಡ್ ನ ಜಲೀಲ ಅಂಬರೀಶ್ ಇನ್ನಿಲ್ಲ.!
ಅಂಬರೀಶ್ ಅಂತ್ಯಕ್ರಿಯೆಯನ್ನ ಬೆಂಗಳೂರಿನಲ್ಲಿ ನಡೆಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಿದ್ದವಿದ್ದರೂ, ಅಂಬರೀಶ್ ಹುಟ್ಟೂರಾದ ಮಂಡ್ಯದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ರೆಬೆಲ್ ಸ್ಟಾರ್ ಅಂಬರೀಶ್ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಕಣ್ಣೀರು
ಇನ್ನೂ ಮಂಡ್ಯದಲ್ಲಿಯೇ ಅಂತ್ಯಸಂಸ್ಕಾರ ಮಾಡಲು ಅಭಿಮಾನಿಗಳು ಕೂಡ ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅಂತ್ಯಕ್ರಿಯೆ ಸ್ಥಳದ ಬಗ್ಗೆ ಇನ್ನೂ ನಿರ್ಧಾರಕ್ಕೆ ಬರಲಾಗಿಲ್ಲ.
ಮಂಡ್ಯ ಅಪಘಾತ ನೋಡಿ ಜೀವ ಬಿಟ್ಟರಾ ಅಂಬರೀಶಣ್ಣಾ.?
ಭಾನುವಾರ ತರಾತುರಿಯಲ್ಲಿ ಅಂತ್ಯಕ್ರಿಯೆ ನಡೆಸುವ ಬದಲು ಸೋಮವಾರ ಅಂತ್ಯಕ್ರಿಯೆ ನಡೆಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಅಂತಿಮ ಸಂಸ್ಕಾರ ನಡೆಸಲು ಮಾತುಕತೆ ನಡೆದಿದೆ ಎನ್ನಲಾಗಿದೆ.
ಕುಟುಂಬಸ್ಥರು ಹಾಗೂ ಚಿತ್ರರಂಗದವರ ಜೊತೆಗೆ ಮಾತುಕತೆ ನಡೆಸಿ, ಎಲ್ಲರ ಸಮ್ಮತಿ ಪಡೆದು ಅಂತ್ಯಕ್ರಿಯೆ ಸ್ಥಳದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ.