ಮುಖ್ಯಮಂತ್ರಿ ಪುತ್ರ ನಿಖಿಲ್ ಬಗ್ಗೆ 'ಹೀಗೊಂದು' ಸುದ್ದಿ.!
Recommended Video

ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಬಿಜಿಯಾಗಿದ್ದಾರೆ. 'ಜಾಗ್ವಾರ್' ಸಕ್ಸಸ್ ಆದ್ಮೇಲೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ 'ಕುರುಕ್ಷೇತ್ರ' ಸಿನಿಮಾದಲ್ಲಿ ಅಭಿನಯಿಸಿದ ನಿಖಿಲ್ ಸದ್ಯ 'ಸೀತಾ ರಾಮ ಕಲ್ಯಾಣ' ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಹೀಗಿರುವಾಗಲೇ, ನಿಖಿಲ್ ಕುಮಾರ್ ಬಗ್ಗೆ ಒಂದು ಸುದ್ದಿ ರಾಜಕೀಯ ವಲಯದಲ್ಲಿ ಗಿರಕಿ ಹೊಡೆಯುತ್ತಿದೆ. ಅದೇನಪ್ಪಾ ಅಂದ್ರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಕಣಕ್ಕೆ ಇಳಿಯಲಿದ್ದಾರಂತೆ.
ಈ ಅಂತೆ-ಕಂತೆ ಸುದ್ದಿಗೆ ಮತ್ತಷ್ಟು ಪುಷ್ಟಿ ನೀಡಿರುವುದು ಚೆನ್ನಿಗಪ್ಪ ರವರ ಹೇಳಿಕೆ. ''ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ನೀಡುತ್ತೇವೆ'' ಎಂದು ಚೆನ್ನಿಗಪ್ಪ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದಾರೆ.

''ಭವಾನಿ ಆದರೂ ಓಕೆ, ನಿಖಿಲ್ ಆದರೂ ಓಕೆ. ಯಾರನ್ನೇ ಕಣಕ್ಕೆ ಇಳಿಸಿದರೂ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು'' ಎಂದು ಚೆನ್ನಿಗಪ್ಪ ಹೇಳಿದ್ದಾರೆ.
ಈಗಾಗಲೇ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಪಕ್ಷದ ಪರವಾಗಿ ನಿಖಿಲ್ ಕುಮಾರ್ ಪ್ರಚಾರ ಮಾಡಿದ್ದರು. ರಾಜಕೀಯಕ್ಕಿಂತ ಸಿನಿಮಾ ನನಗೆ ಅಚ್ಚುಮೆಚ್ಚು ಅಂತ ಅನೇಕ ಬಾರಿ ನಿಖಿಲ್ ಕುಮಾರ್ ಹೇಳಿದ್ದಾರೆ. ಇದೀಗ ಪಕ್ಷದವರ ಒತ್ತಾಯಕ್ಕೆ ಮಣಿದು ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುತ್ತಾರಾ.? ಇದಕ್ಕೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡ ಗ್ರೀನ್ ಸಿಗ್ನಲ್ ಕೊಡ್ತಾರಾ ಅನ್ನೋದೇ ಮುಂದಿನ ಪ್ರಶ್ನೆ.


Click it and Unblock the Notifications











