Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಖವಾಡ' ಹಾಕಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ ವಿನೋದ್ ರಾಜ್
ನಟ, ಡ್ಯಾನ್ಸ್ ರಾಜ ವಿನೋದ್ ರಾಜ್ ರನ್ನು ಅನೇಕರು ಬೆಳ್ಳಿ ಪರದೆ ಮೇಲೆ ಬಹಳ ವರ್ಷಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಅವರು ಮತ್ತೆ ಸಿನಿಮಾ ಮಾಡುವ ಸಮಯ ಬಂದಿದೆ.
'ಮುಖವಾಡ' ಎಂಬ ಚಿತ್ರತಂಡ ತಮ್ಮ ಸಿನಿಮಾಗೆ ವಿನೋದ್ ರಾಜ್ ರನ್ನು ಕರೆತರುವ ತಯಾರಿ ನಡೆಸಿದೆ. ಸಿನಿಮಾದ ಒಂದು ಪಾತ್ರವನ್ನು ಅವರಿಂದ ಮಾಡಿಸುವ ಆಸೆ ಚಿತ್ರತಂಡದಾಗಿದೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆಸಿದ್ದು, ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿ ಇದೆ ಎಂದು ಚಿತ್ರತಂಡ ತಿಳಿಸಿದೆ.
Today special: ಕುರುಕ್ಷೇತ್ರ, ದೇವಕಿ, ವಿನೋದ್ ರಾಜ್ ಕುರಿತು ಆ ಸುದ್ದಿ ಏನು?
ಪವನ್ ತೇಜ್ ಈ ಸಿನಿಮಾದ ನಾಯಕನಾಗಿದ್ದಾರೆ. ಶಿಲ್ಪಾ ಮಂಜುನಾಥ್ ಚಿತ್ರದ ನಾಯಕಿಯಾಗಿದ್ದಾರೆ. ಶಿಲ್ಪಾ ಈಗಾಗಲೇ ಕನ್ನಡ ಹಾಗೂ ತಮಿಳು ಸಿನಿಮಾ ಮಾಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಸಹದೇವ್ 'ಮುಖವಾಡ' ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಎಸ್ ಕೆ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.
ಸಿಎಂ ಭೇಟಿ ಮಾಡಿದ ಲೀಲಾವತಿ ಮತ್ತು ವಿನೋದ್ ರಾಜ್
2009ರಲ್ಲಿ ಬಂದ 'ಯಾರದು' ಎಂಬ ಸಿನಿಮಾ ವಿನೋದ್ ರಾಜ್ ನಟನೆಯ ಕೊನೆಯ ಸಿನಿಮಾವಾಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. 10 ವರ್ಷಗಳ ನಂತರ 'ಮುಖವಾಡ' ಮೂಲಕ ಅವರು ಮರಳಿ ಬಂದರೆ, ಅಭಿಮಾನಿಗಳಿಗೂ ಖುಷಿ ಆಗುತ್ತದೆ.