Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಖವಾಡ' ಹಾಕಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ ವಿನೋದ್ ರಾಜ್
ನಟ, ಡ್ಯಾನ್ಸ್ ರಾಜ ವಿನೋದ್ ರಾಜ್ ರನ್ನು ಅನೇಕರು ಬೆಳ್ಳಿ ಪರದೆ ಮೇಲೆ ಬಹಳ ವರ್ಷಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಅವರು ಮತ್ತೆ ಸಿನಿಮಾ ಮಾಡುವ ಸಮಯ ಬಂದಿದೆ.
'ಮುಖವಾಡ' ಎಂಬ ಚಿತ್ರತಂಡ ತಮ್ಮ ಸಿನಿಮಾಗೆ ವಿನೋದ್ ರಾಜ್ ರನ್ನು ಕರೆತರುವ ತಯಾರಿ ನಡೆಸಿದೆ. ಸಿನಿಮಾದ ಒಂದು ಪಾತ್ರವನ್ನು ಅವರಿಂದ ಮಾಡಿಸುವ ಆಸೆ ಚಿತ್ರತಂಡದಾಗಿದೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆಸಿದ್ದು, ಅವರ ಅಂತಿಮ ಒಪ್ಪಿಗೆ ಮಾತ್ರ ಬಾಕಿ ಇದೆ ಎಂದು ಚಿತ್ರತಂಡ ತಿಳಿಸಿದೆ.
Today special: ಕುರುಕ್ಷೇತ್ರ, ದೇವಕಿ, ವಿನೋದ್ ರಾಜ್ ಕುರಿತು ಆ ಸುದ್ದಿ ಏನು?
ಪವನ್ ತೇಜ್ ಈ ಸಿನಿಮಾದ ನಾಯಕನಾಗಿದ್ದಾರೆ. ಶಿಲ್ಪಾ ಮಂಜುನಾಥ್ ಚಿತ್ರದ ನಾಯಕಿಯಾಗಿದ್ದಾರೆ. ಶಿಲ್ಪಾ ಈಗಾಗಲೇ ಕನ್ನಡ ಹಾಗೂ ತಮಿಳು ಸಿನಿಮಾ ಮಾಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಸಹದೇವ್ 'ಮುಖವಾಡ' ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಎಸ್ ಕೆ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.
ಸಿಎಂ ಭೇಟಿ ಮಾಡಿದ ಲೀಲಾವತಿ ಮತ್ತು ವಿನೋದ್ ರಾಜ್
2009ರಲ್ಲಿ ಬಂದ 'ಯಾರದು' ಎಂಬ ಸಿನಿಮಾ ವಿನೋದ್ ರಾಜ್ ನಟನೆಯ ಕೊನೆಯ ಸಿನಿಮಾವಾಗಿದೆ. ಆ ಬಳಿಕ ಅವರು ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ. 10 ವರ್ಷಗಳ ನಂತರ 'ಮುಖವಾಡ' ಮೂಲಕ ಅವರು ಮರಳಿ ಬಂದರೆ, ಅಭಿಮಾನಿಗಳಿಗೂ ಖುಷಿ ಆಗುತ್ತದೆ.