Don't Miss!
- News Timmappa Gift to Rama: ಶ್ರೀರಾಮ ನವಮಿಯಂದು ರಾಮನಿಗೆ ಉಡುಗೊರೆ ನೀಡಿದ ತಿರುಪತಿ ತಿಮ್ಮಪ್ಪ
- Finance ಕ್ಯಾನ್ಸರ್ಗೆ ಸವಾಲು ಹಾಕಿ ಗೆದ್ದ 33 ವರ್ಷದ ಹುಡುಗಿ ಬಳಿ ಈಗ 10 ಖಾಸಗಿ ಜೆಟ್ಗಳು!
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರಭಾಷೆಗಳಲ್ಲಿ ಪುನೀತ್ 'ಯುವರತ್ನ' ಬಿಡುಗಡೆಯಾಗುವುದೇ?
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿರುವ ಯುವರತ್ನ ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದೆ. ಲಾಕ್ಡೌನ್ ಪರಿಸ್ಥಿತಿಯಿಂದ ಹೊರಬಂದಿರುವ ಚಿತ್ರರಂಗ ಸ್ವಲ್ಪ ಸುಧಾರಿಸಿಕೊಳ್ಳುತ್ತಿದ್ದಂತೆ ತೆರೆಗೆ ಬರಲು ಸಜ್ಜಾಗುತ್ತಿದೆ.
ದಸರಾ ಹಬ್ಬದ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು. ಆದರೆ, ಈ ನಿರೀಕ್ಷೆಯ ಮಧ್ಯೆ ಮತ್ತೊಂದು ಭರ್ಜರಿ ಸುದ್ದಿ ಚರ್ಚೆಯಾಗುತ್ತಿದೆ.
ಸಂತೋಷ್ ಆನಂದರಾಮ್ ರಾತ್ರೋರಾತ್ರಿ ನಟ ಜಗ್ಗೇಶ್ ಗೆ ಫೋನ್ ಮಾಡಿ ಹೇಳಿದ್ದೇನು?
ಯುವರತ್ನ ಸಿನಿಮಾ ಬೇರೆ ಭಾಷೆಗಳಲ್ಲಿ ತೆರೆಕಾಣಲಿದೆ ಎಂಬ ಮಾತು ಗಾಂಧಿನಗರದಲ್ಲಿ ಸದ್ದು ಮಾಡ್ತಿದೆ. ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಾಗಿದ್ದು, ಸ್ಟಾರ್ ನಟರು ಇತರೆ ಭಾಷೆಗಳಲ್ಲಿ ಕನ್ನಡ ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ.
ಈ ಸಾಲಿನಲ್ಲಿ ಯುವರತ್ನ ಸಿನಿಮಾ ಸಹ ಇದೆ ಎಂದು ಹೇಳಲಾಗುತ್ತಿದೆ. ಈ ನಿರೀಕ್ಷೆಯನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತಷ್ಟು ಹೆಚ್ಚಾಗಿಸಿದ್ದಾರೆ. ಬೇರೆ ಭಾಷೆಯಲ್ಲಿ ಯುವರತ್ನ ತೆರೆಕಾಣುವ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿದ್ದಾರೆ.
''ಇತರೆ ಭಾಷೆಗಳಲ್ಲಿ ಯುವರತ್ನ ಸಿನಿಮಾ ರಿಲೀಸ್ ಮಾಡುವ ಬಗ್ಗೆ ನಿರ್ಮಾಪಕರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದ್ರೆ, ಒಂದಂತೂ ಹೇಳಬಲ್ಲೆ. ಯುವರತ್ನ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ'' ಎಂದು ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದಾರೆ.
Recommended Video
'ರಾಜಕುಮಾರ' ಚಿತ್ರದ ನಂತರ ಸಂತೋಷ್ ಆನಂದ್ ರಾಮ್ ಮತ್ತೆ ಪುನೀತ್ ಗೆ ಆಕ್ಷನ್ ಕಟ್ ಹೇಳಿದ್ದಾರೆ. ಸಯೇಶಾ ಸೈಗಲ್ ಈ ಚಿತ್ರದ ನಾಯಕಿ. ಪುನೀತ್ ಜೊತೆ ಧನಂಜಯ್, ವಸಿಷ್ಠ ಸಿಂಹ, ಸೋನು ಗೌಡ, ಹಿರಿಯ ನಟಿ ರಾಧಿಕಾ ಶರತ್ ಕುಮಾರ್, ತ್ರಿವೇಣಿ ರಾವ್ ಸೇರಿದಂಯತೆ ಹಲವರು ನಟಿಸಿದ್ದಾರೆ.