Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಂಗ್ ಕಮಾಂಡರ್ ಅಭಿನಂದನ್ ನಿಜವಾದ ಹೀರೋ, ನಾವು ಡಮ್ಮಿ: ದರ್ಶನ್
Recommended Video
''ವಿಂಗ್ ಕಮಾಂಡರ್ ಅಭಿನಂದನ್ ನಿಜವಾದ ಹೀರೋ, ನಾವು ಅವರ ಮುಂದೆ ಡಮ್ಮಿ. ಅವರಿಗೆ ನನ್ನ ಸಲ್ಯೂಟ್'' ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ಹೇಳಿದ್ದಾರೆ.
ವಿಶ್ವ ವನ್ಯಜೀವಿ ದಿನ ಹಿನ್ನೆಲೆ ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೆಲ್ನಲ್ಲಿ ಮೂರು ದಿನಗಳ ಕಾಲ ನಟ ದರ್ಶನ್ ಸೆರೆ ಹಿಡಿದ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದ್ದು, ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ.
ಅಭಿನಂದನ್ ಬಿಡುಗಡೆ ಬಳಿಕ ಭಾರತ ಮತ್ತೆ ದಾಳಿ ಮಾಡಿದ್ರೆ? ಪಾಕ್ ಅಳಲು
ಬಳಿಕ ಮಾತನಾಡಿದ ದರ್ಶನ್ ''ಇನ್ನೊಬ್ಬರ ನೆಲದಲ್ಲಿ ನಿಂತು ಮಾತನಾಡಲೂ ಗಡ್ಸ್ ಬೇಕು. ನಾನು ಅವರ ಮಾತುಗಳನ್ನು ನೋಡಿದ್ದೇನೆ. ಅವರೇ ನಿಜವಾದ ಹೀರೋ. ಅಭಿನಂದನ್ ಸುರಕ್ಷಿತಾಗಿ ಬರುತ್ತಿರುವುದು ಸಂತೋಷವಾಗುತ್ತಿದೆ'' ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸೇನಾ ಹೀರೋ ಅಭಿನಂದನ್ ಬೇಷರತ್ ಬಿಡುಗಡೆಗೆ 7 ಕಾರಣ
ಅಂದ್ಹಾಗೆ, ವಿಂಗ್ ಕಮಾಂಡರ್ ಅಭಿನಂದನ್ ಕಳೆದ ಎರಡು ದಿನದ ಹಿಂದೆ ಪಾಕಿಸ್ತಾನದ ಸೇನೆಯ ವಶಕ್ಕೆ ಸಿಕ್ಕಿದ್ದರು. ಇದೀಗ, ಇಂದು ಭಾರತ ವಶಕ್ಕೆ ಅಭಿನಂದನ್ ಅವರನ್ನ ನೀಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಿನ್ನೆ ಪಾಕಿಸ್ತಾನ ಸಂಸತ್ತಿನಲ್ಲಿ ಹೇಳಿದ್ದರು. ಭಾರತ ಮತ್ತು ಪಾಕ್ ಗಡಿ ಭಾಗದಲ್ಲಿ ಅಭಿನಂದನ್ ಅವರನ್ನ ಸ್ವಾಗತಿಸಲು, ಭಾರತೀಯ ಸೇನೆ ಮತ್ತು ಪೋಷಕರು ಕಾಯುತ್ತಿದ್ದಾರೆ.