Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜು.13ರಿಂದ 3 ದಿನಗಳ ಚಲನಚಿತ್ರ ಕಥಾ ರಚನಾ ಕಮ್ಮಟ
ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಜುಲೈ 13ರಿಂದ 15ರವರೆಗೆ ಚಲನಚಿತ್ರ ಮೂರು ದಿನಗಳ ಕಥಾ ರಚನಾ ಕಮ್ಮಟವನ್ನು ಕಾವೇರಿ ಸನ್ನಿಧಿ, ಬೊಮ್ಮೂರು ಅಗ್ರಹಾರ, ಪಶ್ಚಿಮ ವಾಹಿನಿ ಸಮೀಪ, ಶ್ರೀರಂಗಪಟ್ಟಣ ತಾಲ್ಲೂಕು, ಮಂಡ್ಯ ಜಿಲ್ಲೆ ಇಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಂಗೀತ ನಿರ್ದೇಶಕ ಡಾ: ಹಂಸಲೇಖ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರು ವಹಿಸಲಿದ್ದಾರೆ.[ಪ್ರೀತಿಗೆ, ಅವರ ರೀತಿಗೆ - ಹಂಸಲೇಖಗೆ ಶುಭಾಶಯಗಳು]
ಮುಖ್ಯ ಅತಿಥಿಗಳಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾದ ಎನ್.ಆರ್.ವಿಶುಕುಮಾರ್, ಚಲನಚಿತ್ರ ನಿರ್ದೇಶಕ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಎನ್.ಆರ್. ನಂಜುಂಡೇಗೌಡ ಹಾಗೂ ಬೀರಪ್ಪ ಭಾಗವಹಿಸಲಿದ್ದಾರೆ.
ಚಲನಚಿತ್ರ ನಿರ್ದೇಶಕ ರಾಮದಾಸ ನಾಯ್ಡು ಹಾಗೂ ಸಾಹಿತಿ, ರಂಗಕರ್ಮಿ ಡಾ: ಕೆ.ವೈ.ನಾರಾಯಣಸ್ವಾಮಿ ಕಮ್ಮಟವನ್ನು ನಿರ್ದೇಶಿಸಲಿದ್ದಾರೆ. ಕಮ್ಮಟದಲ್ಲಿ ಚಲನಚಿತ್ರ ಸಾಹಿತಿ ಹಾಗೂ ಪತ್ರಕರ್ತ ಜೋಗಿ, ಚಲನಚಿತ್ರ ನಿರ್ದೇಶಕಿ ಕು.ಸುಮನಾ ಕಿತ್ತೂರು, ಚಲನಚಿತ್ರ ನಿರ್ದೇಶಕ ಪವನ್ ಕುಮಾರ್ ಭಾಗವಹಿಸಲಿದ್ದಾರೆ. ಕಮ್ಮಟದ ಸಂಚಾಲಕರಾಗಿ ಚಲನಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್ ಪಾಲ್ಗೊಳ್ಳಲಿದ್ದಾರೆ.