Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೋಗಿ ಬರೆದ 'ನಾನು ಪಾರ್ವತಿ' ಪುಸ್ತಕ ಬಿಡುಗಡೆ ಮಾಡಿದ ಸುದೀಪ್
'ಪ್ರೀತಿಸುವವರನ್ನು ಕೊಂದು ಬಿಡಿ' ನಂತರ ಮತ್ತೆ ಜೋಗಿ ಹೊಸ ಪುಸ್ತಕ ಬರೆದಿದ್ದಾರೆ. ಈ ಬಾರಿ ಕನ್ನಡ ಚಿತ್ರರಂಗ ಕಂಡ ಅಮ್ಮ ದೊಡ್ಮನೆ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕುರಿತು ಜೋಗಿ ಪುಸ್ತಕ ರಚಿಸಿದ್ದಾರೆ. 'ನಾನು ಪಾರ್ವತಿ' ಎಂಬ ಹೆಸರಿನ ಈ ಕೃತಿ ಇತ್ತೀಚಿಗಷ್ಟೆ ಬಿಡುಗಡೆಯಾಗಿದೆ.
ಶಿವಣ್ಣನ ಜೊತೆಗಿದ್ದ ಮನಸ್ತಾಪದ ಬಗ್ಗೆ ಓಪನ್ ಆಗಿ ಮಾತನಾಡಿದ ಸುದೀಪ್!
ಕಾರ್ಯಕ್ರಮಕ್ಕೆ ಬಂದು ನಟ ಕಿಚ್ಚ ಸುದೀಪ್ ಈ ಪುಸ್ತಕವನ್ನು ಬಿಡುಗಡೆ ಮಾಡಿದರು. ಅವರೊಂದಿಗೆ ನಟ ರಾಘವೇಂದ್ರ ರಾಜ್ಕುಮಾರ್, ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದ್, ನಿರ್ದೇಶಕ ಭಗವಾನ್, ನಟಿ ಜಯಮಾಲ, ಕನ್ನಡಪ್ರಭದ ಪ್ರಧಾನ ಸಂಪಾದಕ ರವಿ ಹೆಗಡೆ ಉಪಸ್ಥಿತರಿದ್ದರು. ಮಲ್ಲೇಶ್ವರಂನಲ್ಲಿರುವ ಎಸ್ ಆರ್ ವಿ ಥಿಯೇಟರ್ ನಲ್ಲಿ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ''ನಾನು ಇದುವರೆಗೆ ಯಾವ ಬುಕ್ ಓದಿಲ್ಲ. ಆದರೆ ಈ ಬುಕ್ ಖಂಡಿತ ಓದುತ್ತೇನೆ. ಪಾರ್ವತಮ್ಮ ರಾಜ್ ಕುಮಾರ್ ಅವರ ಸಾಧನೆ ಮುಂದೆ ನಾನು ತುಂಬ ಚಿಕ್ಕವನು. ಈ ಬುಕ್ ಕೈ ನಲ್ಲಿ ಹಿಡಿಯುವ ತನಕ ಅದರ ತೂಕ ನನಗೆ ಗೊತ್ತಾಗಿರಲಿಲ್ಲ. ಈ ಬುಕ್ ನಲ್ಲಿರುವ ವಿಷಯವನ್ನು ಜೀವನದಲ್ಲಿ ಅಳವಡಿಸಿ ಕೊಂಡ ಮೇಲೆ ಅದರ ಬಗ್ಗೆ ಮಾತನಾಡುವುದಕ್ಕೆ ನಾನು ಅರ್ಹನಾಗುತ್ತೇನೆ.'' ಎಂದು ಹೇಳಿದರು.
ಅಂದಹಾಗೆ 'ನಾನು ಪಾರ್ವತಿ' ಪುಸ್ತಕ ಪಾರ್ವತಮ್ಮ ರಾಜ್ ಕುಮಾರ್ ತಮ್ಮ ಜೀವನದ ಕಥೆಯನ್ನು ತಾವೇ ಹೇಳಿರುವ ಕಥಾ ಹಂದರವಾಗಿದೆ. ಪಾರ್ವತಮ್ಮನವರು ಇದ್ದಾಗ ಹೇಳಿದ ಅನುಭವದ ಕಥನವನ್ನು ಪತ್ರಕರ್ತ ಹಾಗೂ ಲೇಖಕ ಜೋಗಿ ನಿರೂಪಿಸಿದ್ದಾರೆ. ಈಗಾಗಲೇ ಪಾರ್ವತಮ್ಮ ರಾಜ್ ಕುಮಾರ್ ಬಗ್ಗೆ ಅನೇಕ ಪುಸ್ತಕಗಳು ಬಂದಿದ್ದು ಆ ಪಟ್ಟಿಗೆ ಹೊಸ ಪುಸ್ತಕ ಸೇರಿಕೊಂಡಿದೆ.