Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಯವಿಟ್ಟು ಗಮನಿಸಿ' ವಿಶಿಷ್ಟ ಚಿತ್ರಕ್ಕೆ ಮುಹೂರ್ತ ಆಯ್ತು
'ಕಿರಗೂರಿನ ಗಯ್ಯಾಳಿಗಳು' ಚಿತ್ರದಲ್ಲಿ ಭಯಂಕರ ಗಯ್ಯಾಳಿಯಾಗಿ ನಟಿಸಿ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ನಟಿ ಸುಕೃತಾ ವಾಗ್ಲೆ ತದನಂತರ ಗಾಂಧಿನಗರದಿಂದ ನಾಪತ್ತೆಯಾಗಿದ್ದರು.
ಇದೀಗ ಮತ್ತೆ ಸುಕೃತಾ ಅವರು ಮತ್ತೊಂದು ಸದಭಿರುಚಿಯ ಚಿತ್ರದ ಮೂಲಕ ದಿಢೀರ್ ಪ್ರತ್ಯಕ್ಷ ಆಗಿದ್ದಾರೆ. ಹೌದು 'ಆಟಗಾರ' ಚಿತ್ರಕ್ಕೆ ಡೈಲಾಗ್ ಬರೆದಿದ್ದ ರೋಹಿತ್ ಫದಕಿ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್-ಕಟ್ ಹೇಳುತ್ತಿರುವ ಹೊಸ ಚಿತ್ರ 'ದಯವಿಟ್ಟು ಗಮನಿಸಿ' ಯಲ್ಲಿ ಸುಕೃತಾ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.[ವಿಮರ್ಶೆ: 'ಗಯ್ಯಾಳಿಗಳ ದರ್ಬಾರ್' ನೀವು ನೋಡ್ಲೇಬೇಕು]
'ದಯವಿಟ್ಟು ಗಮನಿಸಿ' ಮಲ್ಟಿಸ್ಟಾರರ್ ಸಿನಿಮಾ ಆಗಿದ್ದು, ಈಗಾಗಲೇ ಚಿತ್ರದ ಮುಹೂರ್ತ ನೆರವೇರಿದೆ. ನಾಲ್ಕು ವಿಭಿನ್ನ ಟ್ರ್ಯಾಕ್ ಗಳು ಕೊನೆಗೆ ಒಂದೆಡೆ ಸೇರುವ ವಿಶಿಷ್ಟ ಕಥೆಯುಳ್ಳ 'ದಯವಿಟ್ಟು ಗಮನಿಸಿ' ಚಿತ್ರದಲ್ಲಿ ಸುಕೃತಾ ವಾಗ್ಲೆ, ಸಂಯುಕ್ತ ಬೆಳವಾಡಿ, ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ್, ವಶಿಷ್ಟ ಎಸ್ ಸಿಂಹ, ರಘು ಮುಖರ್ಜಿ ಮುಂತಾದವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಸೋಮವಾರದಿಂದ (ಜೂನ್ 27) ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದ್ದು, ಕೃಷ್ಣ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಪಕ ಕೃಷ್ಣ ಸಾರ್ಥಕ್ ಅವರು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಗೀತ ನಿರ್ದೇಶಕ ಅನೂಪ್ ಸಿಳೀನ್ ಅವರು ಮ್ಯೂಸಿಕ್ ಕಂಪೋಸ್ ಜೊತೆಗೆ ಚಿತ್ರದ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತಿದ್ದಾರೆ.
ಒಟ್ನಲ್ಲಿ 'ಕಿರಗೂರಿನ ಗಯ್ಯಾಳಿಗಳು', 'ತಿಥಿ', ಮತ್ತು 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಿತ್ರದ ನಂತರ ಮತ್ತೊಂದು ಸದಭಿರುಚಿಯ ಸಿನಿಮಾ ಬರ್ತಾ ಇದೆ ಅಂತ ಫುಲ್ ಖುಷ್ ನಲ್ಲಿದ್ದಾರೆ ಚಿತ್ರಪ್ರೇಮಿಗಳು.