Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಯವಿಟ್ಟು ಗಮನಿಸಿ' ವಿಶಿಷ್ಟ ಚಿತ್ರಕ್ಕೆ ಮುಹೂರ್ತ ಆಯ್ತು
'ಕಿರಗೂರಿನ ಗಯ್ಯಾಳಿಗಳು' ಚಿತ್ರದಲ್ಲಿ ಭಯಂಕರ ಗಯ್ಯಾಳಿಯಾಗಿ ನಟಿಸಿ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ನಟಿ ಸುಕೃತಾ ವಾಗ್ಲೆ ತದನಂತರ ಗಾಂಧಿನಗರದಿಂದ ನಾಪತ್ತೆಯಾಗಿದ್ದರು.
ಇದೀಗ ಮತ್ತೆ ಸುಕೃತಾ ಅವರು ಮತ್ತೊಂದು ಸದಭಿರುಚಿಯ ಚಿತ್ರದ ಮೂಲಕ ದಿಢೀರ್ ಪ್ರತ್ಯಕ್ಷ ಆಗಿದ್ದಾರೆ. ಹೌದು 'ಆಟಗಾರ' ಚಿತ್ರಕ್ಕೆ ಡೈಲಾಗ್ ಬರೆದಿದ್ದ ರೋಹಿತ್ ಫದಕಿ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ಆಕ್ಷನ್-ಕಟ್ ಹೇಳುತ್ತಿರುವ ಹೊಸ ಚಿತ್ರ 'ದಯವಿಟ್ಟು ಗಮನಿಸಿ' ಯಲ್ಲಿ ಸುಕೃತಾ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.[ವಿಮರ್ಶೆ: 'ಗಯ್ಯಾಳಿಗಳ ದರ್ಬಾರ್' ನೀವು ನೋಡ್ಲೇಬೇಕು]
'ದಯವಿಟ್ಟು ಗಮನಿಸಿ' ಮಲ್ಟಿಸ್ಟಾರರ್ ಸಿನಿಮಾ ಆಗಿದ್ದು, ಈಗಾಗಲೇ ಚಿತ್ರದ ಮುಹೂರ್ತ ನೆರವೇರಿದೆ. ನಾಲ್ಕು ವಿಭಿನ್ನ ಟ್ರ್ಯಾಕ್ ಗಳು ಕೊನೆಗೆ ಒಂದೆಡೆ ಸೇರುವ ವಿಶಿಷ್ಟ ಕಥೆಯುಳ್ಳ 'ದಯವಿಟ್ಟು ಗಮನಿಸಿ' ಚಿತ್ರದಲ್ಲಿ ಸುಕೃತಾ ವಾಗ್ಲೆ, ಸಂಯುಕ್ತ ಬೆಳವಾಡಿ, ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ್, ವಶಿಷ್ಟ ಎಸ್ ಸಿಂಹ, ರಘು ಮುಖರ್ಜಿ ಮುಂತಾದವರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಸೋಮವಾರದಿಂದ (ಜೂನ್ 27) ಚಿತ್ರದ ಚಿತ್ರೀಕರಣ ಆರಂಭವಾಗುತ್ತಿದ್ದು, ಕೃಷ್ಣ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಪಕ ಕೃಷ್ಣ ಸಾರ್ಥಕ್ ಅವರು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಂಗೀತ ನಿರ್ದೇಶಕ ಅನೂಪ್ ಸಿಳೀನ್ ಅವರು ಮ್ಯೂಸಿಕ್ ಕಂಪೋಸ್ ಜೊತೆಗೆ ಚಿತ್ರದ ಸಹ ನಿರ್ಮಾಪಕರ ಜವಾಬ್ದಾರಿ ಹೊತ್ತಿದ್ದಾರೆ.
ಒಟ್ನಲ್ಲಿ 'ಕಿರಗೂರಿನ ಗಯ್ಯಾಳಿಗಳು', 'ತಿಥಿ', ಮತ್ತು 'ಗೋಧಿ ಬಣ್ಣ ಸಾಧಾರಣ ಮೈಕಟ್ಟು' ಚಿತ್ರದ ನಂತರ ಮತ್ತೊಂದು ಸದಭಿರುಚಿಯ ಸಿನಿಮಾ ಬರ್ತಾ ಇದೆ ಅಂತ ಫುಲ್ ಖುಷ್ ನಲ್ಲಿದ್ದಾರೆ ಚಿತ್ರಪ್ರೇಮಿಗಳು.