Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ' ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಾರಂಭ
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. 'ಯಜಮಾನ' ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಇಂದಿನಿಂದ ಶುರು ಆಗಿದೆ.
ಬುಕ್ ಮೈ ಶೋ ನಲ್ಲಿ ಚಿತ್ರದ ಟಿಕೆಟ್ ಗಳು ಲಭ್ಯವಿದೆ. ಸದ್ಯಕ್ಕೆ ಕೆಲವು ಚಿತ್ರಮಂದಿರಗಳಲ್ಲಿ ಬುಕ್ಕಿಂಗ್ ಅನ್ನು ಓಪನ್ ಮಾಡಲಾಗಿದೆ. ಬೆಂಗಳೂರಿನ ಊರ್ವಶಿ, ತುಳಸಿ, ಶ್ರೀನಿವಾಸ, ಗೋಪಾಲನ್ ಸಿನಿಮಾಸ್, ಸಿದ್ದಲಿಂಗೇಶ್ವರ ಚಿತ್ರಮಂದಿರಗಳಲ್ಲಿ ಸದ್ಯಕ್ಕೆ ಬುಕ್ಕಿಂಗ್ ಶುರುವಾಗಿದೆ.
'ಯಜಮಾನ' ಚಿತ್ರಮಂದಿರಗಳ ಪಟ್ಟಿ ಬಹಿರಂಗ: ಭಾನುವಾರದಿಂದ ಬುಕ್ಕಿಂಗ್ ಶುರು
ಮಾರತ್ ಹಳ್ಳಿಯ ತುಳಸಿ ಚಿತ್ರಮಂದಿರದಲ್ಲಿ ಬೆಳಗ್ಗೆ 6.30ಕ್ಕೆ ಮೊದಲ ಪ್ರದರ್ಶನ ಪ್ರಾರಂಭ ಆಗುತ್ತಿದೆ. ಸಿನಿಮಾದ ಕ್ರೇಜ್ ತುಂಬಾನೇ ಜೋರಾಗಿದ್ದು, ಚಿತ್ರಮಂದಿರಗಳ ಸಂಖ್ಯೆ ಅಧಿಕ ಆಗಲಿದೆ. ಸದ್ಯಕ್ಕೆ ಎಂಟು ಚಿತ್ರಮಂದಿರಗಳಲ್ಲಿ ಬುಕ್ಕಿಂಗ್ ಪ್ರಾರಂಭವಾಗಿದೆ. ಒಂದೊಂದೇ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾಗುತ್ತಿದೆ.
'ಯಜಮಾನ' ಸಿನಿಮಾದ ಮೂಲಕ ದರ್ಶನ್ ಒಂದೂವರೆ ವರ್ಷಗಳ ಬಳಿಕ ಬರುತ್ತಿದ್ದಾರೆ. ಸಿನಿಮಾದ ಮೇಲೆ ದೊಡ್ಡ ನಿರೀಕ್ಷೆ ಇದೆ. ದರ್ಶನ್, ರಶ್ಮಿಕಾ ಮಂದಣ್ಣ, ತಾನ್ಯ ಹೂಪ್, ದೇವರಾಜ್, ಧನಂಜಯ್, ಠಾಕೂರ್ ಅನೂಪ್ ಸಿಂಗ್, ರವಿಶಂಕರ್ ಸೇರಿದಂತೆ ಬಹು ತಾರಾಗಣ ಚಿತ್ರದಲ್ಲಿದೆ.
ವಿ ಹರಿಕೃಷ್ಣ ಸಂಗೀತ ನಿರ್ದೇಶನದ ಜೊತೆಗೆ ಡೈರೆಕ್ಟರ್ ಕೂಡ ಆಗಿದ್ದಾರೆ. ಶೈಲಜಾ ನಾಗ್ ಚಿತ್ರದ ನಿರ್ಮಾಣ ಹಾಗೂ ವಿತರಣೆ ಮಾಡುತ್ತಿದ್ದಾರೆ.