Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'KGF-2' ಚಿತ್ರೀಕರಣಕ್ಕೆ ರಾಕಿ ಭಾಯ್-ರೀನಾ ಎಂಟ್ರಿ: ಎಲ್ಲಿ ನಡೆಯುತ್ತಿದೆ ಶೂಟಿಂಗ್?
ರಾಕಿಂಗ್ ಸ್ಟಾರ್ ಯಶ್ ಸುಮಾರು 7 ತಿಂಗಳುಗಳ ಬಳಿಕ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಇಡೀ ದೇಶವೆ ಕಾತರದಿಂದ ಕಾಯುತ್ತಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣಕ್ಕೆ ರಾಕಿ ಭಾಯ್ ಎಂಟ್ರಿ ಕೊಡುತ್ತಿದ್ದು, ಗುರುವಾರದಿಂದ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತಿದ್ದಾರೆ.
ಈಗಾಗಲೇ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಲಾಕ್ ಡೌನ್ ಬಳಿಕ ಶೂಟಿಂಗ್ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಪಾರ್ಟ್-2ಗೆ ನಟ ಪ್ರಕಾಶ್ ರೈ ಎಂಟ್ರಿ ಕೊಟ್ಟಿದ್ದು, ಈಗಾಗಲೇ ಪ್ರಕಾಶ್ ರೈ ಪಾತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇದೀಗ ರಾಕಿ ಭಾಯ್ ಭಾಗದ ಚಿತ್ರೀಕರಣ ನಡೆಯುತ್ತಿದೆ. ವಿಶೇಷ ಎಂದರೆ ರಾಕಿ ಭಾಯ್ ಜೊತೆಗೆ ರೀನಾ ಕೂಡ ಚಿತ್ರೀಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ನಟಿ ಶ್ರೀನಿಧಿ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಪಡಿಸಿದ್ದಾರೆ.
'KGF-2' ಸಿನಿಮಾ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಿಕ್ತು ಶುಭ ಸುದ್ದಿ
ವಿಮಾನ ನಿಲ್ದಾಣದಲ್ಲಿ ಪ್ರಶಾಂತ್ ನೀಲ್-ಶ್ರೀನಿಧಿ
ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ನಟಿ ಶ್ರೀನಿಧಿ ಶೆಟ್ಟಿ ಚಿತ್ರೀಕರಣಕ್ಕೆ ಹೊರಟಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಶಾಂತ್ ನೀಲ್ ಜೊತೆ ಕುಳಿತಿರುವ ಫೋಟೋ ಹಂಚಿಕೊಂಡು 8 ತಿಂಗಳ ಬಳಿಕ ಮತ್ತೆ ಕೆಜಿಎಫ್-2 ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಚಿತ್ರೀಕರಣ
ಅಂದ್ಹಾಗೆ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಮಂಗಳೂರಿನಲ್ಲಿ ನಡೆಯುತ್ತಿದೆ. ಕರಾವಳಿ ಪ್ರದೇಶದಲ್ಲಿ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯುತ್ತಿದೆ ಸಿನಿಮಾತಂಡ. ಮಂಗಳೂರಿನ ಕಡೆ ಪಯಣ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಬರೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಬೆಂಗಳೂರಿನಲ್ಲೇ ಚಿತ್ರೀಕರಣ ಪ್ರಾರಂಭಮಾಡಿದ ಚಿತ್ರತಂಡ ಇದೀಗ ಮಂಗಳೂರಿಗೆ ಹೊರಟಿದೆ. ನಟ ಯಶ್ ಕೂಡ ಮಂಗಳೂರಿಗೆ ಪಯಣ ಬೆಳೆಸಿದ್ದಾರೆ.
ನಾಡ ಹಬ್ಬಕ್ಕೆ ಕೆಜಿಎಫ್ 2 ಚಿತ್ರತಂಡದಿಂದ ಭರ್ಜರಿ ಉಡುಗೊರೆ
ಅಕ್ಟೊಬರ್ ನಲ್ಲಿ ಚಿತ್ರೀಕರಣ ಮುಗಿಸುವ ಪ್ಲಾನ್
ಇಡೀ ಭಾರತೀಯ ಸಿನಿಮಾ ಪ್ರಿಯರ ಗಮನ ಸೆಳೆದಿರುವ ಕೆಜಿಎಫ್-2 ಸಿನಿಮಾದ ಚಿತ್ರೀಕರಣ ಈ ತಿಂಗಳ ಕೊನೆಯಲ್ಲಿ ಮುಗಿಸುವ ಪ್ಲಾನ್ ಮಾಡಿದೆಯಂತೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಯಶ್ ಮತ್ತು ಸಂಜಯ್ ದತ್ ಭಾಗದ ಚಿತ್ರೀಕರಣ ಬಾಕಿಯುಳಿದಿದೆ. ಸದ್ಯ ಸಂಜಯ್ ದತ್ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಜಯ್ ದತ್ ಗುಣಮುಖರಾಗುತ್ತಿದ್ದಂತೆ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಯಾವಾಗ ಎನ್ನುವ ಎನ್ನುವುದು ಗೊತ್ತಿಲ್ಲ.
Recommended Video
ದಸರಾ ಹಬ್ಬಕ್ಕೆ ಟೀಸರ್ ರಿಲೀಸ್ ಸಾಧ್ಯತೆ
ಇಡೀ ದೇಶದ ಗಮನ ಸೆಳೆದಿರುವ ಕೆಜಿಎಫ್ ಸಿನಿಮಾ ದಸರಾ ಹಬ್ಬಕ್ಕೆ ರಿಲೀಸ್ ಆಗಲು ಸಿದ್ಧವಾಗಿತ್ತು. ಆದರೆ ಕೊರೊನಾ ವೈರಸ್ ಹಾವಳಿಯಿಂದ ಸಿನಿಮಾ ಲೆಕ್ಕಾಚಾರ ತಲೆಕೆಳಗಾಗಿದೆ. ಸಿನಿಮಾ ರಿಲೀಸ್ ಆಗದಿದ್ದರೂ ಟೀಸರ್ ರಿಲೀಸ್ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹಾಗಾಗಿ ದಸರಾ ಹಬ್ಬಕ್ಕೆ ಕೆಜಿಎಪ್-2 ಕಡೆಯಿಂದ ಭರ್ಜರಿ ಗಿಫ್ಟ್ ನ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.