Just In
Don't Miss!
- News
ಭಾರತದಲ್ಲಿ 20.29 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
- Sports
ಸಯ್ಯದ್ ಮುಷ್ತಾಕ್ ಅಲಿ: ಹಿಮಾಚಲ ಪ್ರದೇಶ ಮಣಿಸಿದ ತಮಿಳುನಾಡು
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Automobiles
ವಿನೂತನ ಫೀಚರ್ಸ್ಗಳೊಂದಿಗೆ ನ್ಯೂ ಜನರೇಷನ್ ಟಾಟಾ ಸಫಾರಿ ಎಸ್ಯುವಿ ಅನಾವರಣ
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೈಸೂರಿನಲ್ಲಿ ಚುನಾವಣಾ ಪ್ರಚಾರ ಶುರು ಮಾಡಿದ ರಾಜಾಹುಲಿ

ಕರ್ನಾಟಕ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಅನೇಕ ಸಿನಿಮಾರಂಗದ ಕಲಾವಿದರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ನಟ ಯಶ್ ಸಹ ಇದೀಗ ಮೈಸೂರಿನ ಮೂಲಕ ತಮ್ಮ ಚುನಾವಣಾ ಪ್ರಚಾರವನ್ನು ಪ್ರಾರಂಭ ಮಾಡಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ ರಾಕಿಂಗ್ ಸ್ಟಾರ್ ಯಶ್.!
ಯಶ್ ಯಾವ ಪಕ್ಷದ ಪರವಾಗಿ ಮತ ಯಾಚನೆ ಮಾಡುತ್ತಾರೆ ಎನ್ನುವ ಕುತೂಹಲ ಅನೇಕ ದಿನದಿಂದ ಇತ್ತು. ಯಶ್ ಕೂಡ ನಾನು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗದೆ, ಒಳ್ಳೆಯ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇನೆ ಎಂದಿದ್ದರು. 'ಪಕ್ಷಕ್ಕಿಂತ ವ್ಯಕ್ತಿ ಮುಖ್ಯ' ಎಂದು ಹೇಳಿದ ಅವರು ಈಗ ಇಬ್ಬರು ಅಭ್ಯರ್ಥಿಗಳಿಗೆ ಸಾಥ್ ನೀಡಿದ್ದಾರೆ.
ಮೈಸೂರಿನ ಕೃಷ್ಣರಾಜ (ಕೆ.ಆರ್ ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್ .ಎ ರಾಮದಾಸ್ ಮತ್ತು ಜೆ ಡಿ ಎಸ್ ಪಕ್ಷದ ಸಾ.ರಾ ಮಹೇಶ್ ಅವರ ಪರ ನಟ ಯಶ್ ಪ್ರಚಾರ ನಡೆಸಲಿದ್ದಾರೆ. ಇಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಯಶ್ ಪಾಲ್ಗೊಂಡು, ಈ ಇಬ್ಬರ ಪರ ಪ್ರಚಾರ ಮಾಡಲಿದ್ದಾರೆ. ಇಂದು ಬೆಳ್ಳಗೆ ಸಾ.ರಾ ಮಹೇಶ್ ಮತ್ತು ಸಂಜೆ ರಾಮ್ ದಾಸ್ ಅವರ ಪರ ಯಶ್ ರೋಡ್ ಶೋ ಮಾಡಲಿದ್ದಾರೆ.
ಮೈಸೂರಲ್ಲಿ ಬಿಜೆಪಿ ಅಭ್ಯರ್ಥಿ ಪರ ನಟ ಯಶ್ ಪ್ರಚಾರ
''ನಾನು ಸ್ನೇಹಪೂರ್ವಕವಾಗಿ ರಾಮದಾಸ್ ಪರ ಪ್ರಚಾರ ಮಾಡುತ್ತಿದ್ದೇನೆ. ಇದೇ ರೀತಿ, ಇತರೆ ಪಕ್ಷದ ಆತ್ಮೀಯರ ಪರ ಕೂಡಾ ಪ್ರಚಾರ ಕೈಗೊಳ್ಳಬಹುದು. ನಾನು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ'' ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.