Don't Miss!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನಲ್ಲಿ ಚುನಾವಣಾ ಪ್ರಚಾರ ಶುರು ಮಾಡಿದ ರಾಜಾಹುಲಿ
Recommended Video
ಕರ್ನಾಟಕ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಅನೇಕ ಸಿನಿಮಾರಂಗದ ಕಲಾವಿದರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ನಟ ಯಶ್ ಸಹ ಇದೀಗ ಮೈಸೂರಿನ ಮೂಲಕ ತಮ್ಮ ಚುನಾವಣಾ ಪ್ರಚಾರವನ್ನು ಪ್ರಾರಂಭ ಮಾಡಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ ರಾಕಿಂಗ್ ಸ್ಟಾರ್ ಯಶ್.!
ಯಶ್ ಯಾವ ಪಕ್ಷದ ಪರವಾಗಿ ಮತ ಯಾಚನೆ ಮಾಡುತ್ತಾರೆ ಎನ್ನುವ ಕುತೂಹಲ ಅನೇಕ ದಿನದಿಂದ ಇತ್ತು. ಯಶ್ ಕೂಡ ನಾನು ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗದೆ, ಒಳ್ಳೆಯ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇನೆ ಎಂದಿದ್ದರು. 'ಪಕ್ಷಕ್ಕಿಂತ ವ್ಯಕ್ತಿ ಮುಖ್ಯ' ಎಂದು ಹೇಳಿದ ಅವರು ಈಗ ಇಬ್ಬರು ಅಭ್ಯರ್ಥಿಗಳಿಗೆ ಸಾಥ್ ನೀಡಿದ್ದಾರೆ.
ಮೈಸೂರಿನ ಕೃಷ್ಣರಾಜ (ಕೆ.ಆರ್ ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್ .ಎ ರಾಮದಾಸ್ ಮತ್ತು ಜೆ ಡಿ ಎಸ್ ಪಕ್ಷದ ಸಾ.ರಾ ಮಹೇಶ್ ಅವರ ಪರ ನಟ ಯಶ್ ಪ್ರಚಾರ ನಡೆಸಲಿದ್ದಾರೆ. ಇಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಯಶ್ ಪಾಲ್ಗೊಂಡು, ಈ ಇಬ್ಬರ ಪರ ಪ್ರಚಾರ ಮಾಡಲಿದ್ದಾರೆ. ಇಂದು ಬೆಳ್ಳಗೆ ಸಾ.ರಾ ಮಹೇಶ್ ಮತ್ತು ಸಂಜೆ ರಾಮ್ ದಾಸ್ ಅವರ ಪರ ಯಶ್ ರೋಡ್ ಶೋ ಮಾಡಲಿದ್ದಾರೆ.
ಮೈಸೂರಲ್ಲಿ ಬಿಜೆಪಿ ಅಭ್ಯರ್ಥಿ ಪರ ನಟ ಯಶ್ ಪ್ರಚಾರ
''ನಾನು ಸ್ನೇಹಪೂರ್ವಕವಾಗಿ ರಾಮದಾಸ್ ಪರ ಪ್ರಚಾರ ಮಾಡುತ್ತಿದ್ದೇನೆ. ಇದೇ ರೀತಿ, ಇತರೆ ಪಕ್ಷದ ಆತ್ಮೀಯರ ಪರ ಕೂಡಾ ಪ್ರಚಾರ ಕೈಗೊಳ್ಳಬಹುದು. ನಾನು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ'' ಎಂದು ಯಶ್ ಸ್ಪಷ್ಟಪಡಿಸಿದ್ದಾರೆ.