ಶ್ರೀರಾಮುಲು ಪರ 'ಮಾಸ್ಟರ್ ಪೀಸ್' ಯಶ್ ಮತಯಾಚನೆ
Recommended Video

ಕರ್ನಾಟಕ ಚುನಾವಣೆ ಪ್ರಚಾರ ಜೋರಾಗಿದೆ. ಅದರಲ್ಲಿಯೂ ಚುನಾವಣಾ ಪ್ರಚಾರಕ್ಕೆ ತಾರ ಮೆರಗು ಸಿಕ್ಕಿದೆ. ನಟ ಸುದೀಪ್ ಹಾಗೂ ಯಶ್ ಬಿಡುವಿಲ್ಲದೆ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಅಂದಹಾಗೆ, ಯಶ್ ಇದೀಗ ಶ್ರೀರಾಮುಲು ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಸಂಸದ ಶ್ರೀರಾಮುಲು ಈ ಬಾರಿ ಎರಡು ಕ್ಷೇತ್ರದಿಂದ ಅಖಾಡಕ್ಕೆ ಇಳಿದಿದ್ದಾರೆ. ಬಾದಾಮಿ ಮತ್ತು ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಶ್ರೀರಾಮುಲು ಅವರಿಗೆ ಈಗ ರಾಜಹುಲಿಯ ಬೆಂಬಲ ಸಹ ಸಿಕ್ಕಿದೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಅವರ ಪರವಾಗಿ ಯಶ್ ಮತ ಕೇಳಲಿದ್ದಾರೆ.

ಯಾವುದೇ ಪಕ್ಷಕ್ಕೆ ಸೀಮಿತವಾಗಿರದೆ ವ್ಯಕ್ತಿಗಳ ಪರವಾಗಿ ಯಶ್ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದರು. ಅದೇ ರೀತಿ ಕಳೆದ ಬುದವಾರ ಮೈಸೂರಿನ ಕೃಷ್ಣರಾಜ (ಕೆ.ಆರ್ ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಸ್ .ಎ ರಾಮದಾಸ್ ಮತ್ತು ಜೆ ಡಿ ಎಸ್ ಪಕ್ಷದ ಸಾ.ರಾ ಮಹೇಶ್ ಅವರ ಪರ ನಟ ಯಶ್ ಪ್ರಚಾರ ನಡೆಸಿದರು. ಬೃಹತ್ ಸಮಾವೇಶದಲ್ಲಿ ಯಶ್ ಪಾಲ್ಗೊಂಡು, ಈ ಇಬ್ಬರ ಪರ ಪ್ರಚಾರ ಮಾಡಿದ್ದರು.
ಅಂದಹಾಗೆ, ಇಂದು ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಅವರ ಪರವಾಗಿ ಸಹ ಯಶ್ ಪ್ರಚಾರ ಮಾಡುತ್ತಿದ್ದಾರೆ.


Click it and Unblock the Notifications











