Don't Miss!
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- News Bengaluru-Mysuru Expressway Toll fee: ಏಪ್ರಿಲ್ 1ರಿಂದ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ.!-ಯಾವ್ಯಾವ ವಾಹನಗಳಿಗೆ ಎಷ್ಟು?
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಕಾರದ ನಿರ್ಧಾರದಿಂದ ಚಿತ್ರರಂಗ ಬಲಿ: ರಂಗಕ್ಕಿಳಿದ ರಾಕಿ ಭಾಯ್
ಚಿತ್ರಮಂದಿರಗಳ ಮೇಲೆ ಸರ್ಕಾರ ಹೇರಿರುವ ನಿರ್ಬಂಧ ವಿರೋಧಿಸಿ ಈಗಾಗಲೇ ಹಲವಾರು ನಟ, ನಿರ್ದೇಶಕ, ನಿರ್ಮಾಪಕರುಗಳು ತಮ್ಮ-ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಯಶ್ ಸಹ ರಂಗಕ್ಕೆ ಇಳಿದಿದ್ದಾರೆ.
ಸರ್ಕಾರದ ಹಠಾತ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಯಶ್, ಟ್ವೀಟ್ ಮೂಲಕ ಸರ್ಕಾರದ ಆದೇಶವನ್ನು ಖಂಡಿಸಿದ್ದಾರೆ.
'ನಮ್ಮಲ್ಲಿ ಜಾಗೃತಿ ಮೂಡಿದೆ, ಜವಾಬ್ದಾರಿಯೂ ಇದೆ. ಹಸಿವಿಗಿಂತಲೂ ದೊಡ್ಡ ಖಾಯಿಲೆ ಇಲ್ಲ. ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೆ ಹೊರತು ಮುಳುವಾಗಬಾರದು. ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ ಇದೆ. ಚಿತ್ರರಂಗಕ್ಕೆ ಯಾಕಿಲ್ಲ? ಸಚನೆ ಕೊಡದೆ ಮಾಡಿರುವ ಈ ನಿರ್ಬಂಧನೆಗಳಿಂದ ಚಿತ್ರರಂಗ ಬಲಿ' ಎಂದಿದ್ದಾರೆ ನಟ ಯಶ್.
ಯಶ್ ಮಾಡಿರುವ ಈ ಟ್ವೀಟ್ ಅನ್ನು ಪುನೀತ್ ರಾಜ್ಕುಮಾರ್, 'ಯುವರತ್ನ' ನಿರ್ದೇಶಕ ಸಂತೋಶ್ ಆನಂದ್ರಾಮ್, ಹೊಂಬಾಳೆ ಫಿಲಮ್ಸ್ ಜೊತೆಗೆ ಸಿಎಂ ಯಡಿಯೂರಪ್ಪ ಅವರಿಗೂ ಟ್ಯಾಗ್ ಮಾಡಿದ್ದಾರೆ ಯಶ್.
ಯಶ್ ಅವರ 'ಕೆಜಿಎಫ್ 2' ಸಹ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ. 'ಯುವರತ್ನ' ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಮ್ಸ್ ಅವರೇ ಆ ಸಿನಿಮಾವನ್ನೂ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪುನೀತ್ ಹಾಗೂ ಯಶ್ ಅವರು ಆಪ್ತ ಗೆಳೆಯರೂ ಸಹ ಹಾಗಾಗಿ ಸಂಕಷ್ಟಕ್ಕೆ ಸಿಲುಕಿರುವ ಪುನೀತ್ ಅವರ ಸಿನಿಮಾದ ನೆರವಿಗೆ ಬಂದಿದ್ದಾರೆ ನಟ ಯಶ್.
Recommended Video
ಈಗಾಗಲೇ ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ಸ್ವತಃ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ಸುದೀಪ್ ಹಲವಾರು ನಿರ್ಮಾಪಕರು ಸರ್ಕಾರದ ದಿಢೀರ್ ಕ್ರಮವನ್ನು ಪ್ರಶ್ನಿಸಿದ್ದಾರೆ.