ಸರ್ಕಾರದ ನಿರ್ಧಾರದಿಂದ ಚಿತ್ರರಂಗ ಬಲಿ: ರಂಗಕ್ಕಿಳಿದ ರಾಕಿ ಭಾಯ್
ಚಿತ್ರಮಂದಿರಗಳ ಮೇಲೆ ಸರ್ಕಾರ ಹೇರಿರುವ ನಿರ್ಬಂಧ ವಿರೋಧಿಸಿ ಈಗಾಗಲೇ ಹಲವಾರು ನಟ, ನಿರ್ದೇಶಕ, ನಿರ್ಮಾಪಕರುಗಳು ತಮ್ಮ-ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಯಶ್ ಸಹ ರಂಗಕ್ಕೆ ಇಳಿದಿದ್ದಾರೆ.
ಸರ್ಕಾರದ ಹಠಾತ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಯಶ್, ಟ್ವೀಟ್ ಮೂಲಕ ಸರ್ಕಾರದ ಆದೇಶವನ್ನು ಖಂಡಿಸಿದ್ದಾರೆ.
'ನಮ್ಮಲ್ಲಿ ಜಾಗೃತಿ ಮೂಡಿದೆ, ಜವಾಬ್ದಾರಿಯೂ ಇದೆ. ಹಸಿವಿಗಿಂತಲೂ ದೊಡ್ಡ ಖಾಯಿಲೆ ಇಲ್ಲ. ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೆ ಹೊರತು ಮುಳುವಾಗಬಾರದು. ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ ಇದೆ. ಚಿತ್ರರಂಗಕ್ಕೆ ಯಾಕಿಲ್ಲ? ಸಚನೆ ಕೊಡದೆ ಮಾಡಿರುವ ಈ ನಿರ್ಬಂಧನೆಗಳಿಂದ ಚಿತ್ರರಂಗ ಬಲಿ' ಎಂದಿದ್ದಾರೆ ನಟ ಯಶ್.

ಯಶ್ ಮಾಡಿರುವ ಈ ಟ್ವೀಟ್ ಅನ್ನು ಪುನೀತ್ ರಾಜ್ಕುಮಾರ್, 'ಯುವರತ್ನ' ನಿರ್ದೇಶಕ ಸಂತೋಶ್ ಆನಂದ್ರಾಮ್, ಹೊಂಬಾಳೆ ಫಿಲಮ್ಸ್ ಜೊತೆಗೆ ಸಿಎಂ ಯಡಿಯೂರಪ್ಪ ಅವರಿಗೂ ಟ್ಯಾಗ್ ಮಾಡಿದ್ದಾರೆ ಯಶ್.
ಯಶ್ ಅವರ 'ಕೆಜಿಎಫ್ 2' ಸಹ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ. 'ಯುವರತ್ನ' ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಮ್ಸ್ ಅವರೇ ಆ ಸಿನಿಮಾವನ್ನೂ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪುನೀತ್ ಹಾಗೂ ಯಶ್ ಅವರು ಆಪ್ತ ಗೆಳೆಯರೂ ಸಹ ಹಾಗಾಗಿ ಸಂಕಷ್ಟಕ್ಕೆ ಸಿಲುಕಿರುವ ಪುನೀತ್ ಅವರ ಸಿನಿಮಾದ ನೆರವಿಗೆ ಬಂದಿದ್ದಾರೆ ನಟ ಯಶ್.
Recommended Video
ಈಗಾಗಲೇ ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ಸ್ವತಃ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ಸುದೀಪ್ ಹಲವಾರು ನಿರ್ಮಾಪಕರು ಸರ್ಕಾರದ ದಿಢೀರ್ ಕ್ರಮವನ್ನು ಪ್ರಶ್ನಿಸಿದ್ದಾರೆ.


Click it and Unblock the Notifications











