Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರ್ಕಾರದ ನಿರ್ಧಾರದಿಂದ ಚಿತ್ರರಂಗ ಬಲಿ: ರಂಗಕ್ಕಿಳಿದ ರಾಕಿ ಭಾಯ್
ಚಿತ್ರಮಂದಿರಗಳ ಮೇಲೆ ಸರ್ಕಾರ ಹೇರಿರುವ ನಿರ್ಬಂಧ ವಿರೋಧಿಸಿ ಈಗಾಗಲೇ ಹಲವಾರು ನಟ, ನಿರ್ದೇಶಕ, ನಿರ್ಮಾಪಕರುಗಳು ತಮ್ಮ-ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ನಟ ಯಶ್ ಸಹ ರಂಗಕ್ಕೆ ಇಳಿದಿದ್ದಾರೆ.
ಸರ್ಕಾರದ ಹಠಾತ್ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಯಶ್, ಟ್ವೀಟ್ ಮೂಲಕ ಸರ್ಕಾರದ ಆದೇಶವನ್ನು ಖಂಡಿಸಿದ್ದಾರೆ.
'ನಮ್ಮಲ್ಲಿ ಜಾಗೃತಿ ಮೂಡಿದೆ, ಜವಾಬ್ದಾರಿಯೂ ಇದೆ. ಹಸಿವಿಗಿಂತಲೂ ದೊಡ್ಡ ಖಾಯಿಲೆ ಇಲ್ಲ. ನಿರ್ಬಂಧನೆಗಳು ನಮ್ಮ ಬದುಕಿಗೆ ಸಹಾಯವಾಗಬೇಕೆ ಹೊರತು ಮುಳುವಾಗಬಾರದು. ಚಿತ್ರರಂಗದ ಮೇಲಿನ ಹಠಾತ್ ಧೋರಣೆ ಖಂಡನೀಯ. ಎಲ್ಲರಿಗೂ ದುಡಿಯುವ ಅವಕಾಶ ಇದೆ. ಚಿತ್ರರಂಗಕ್ಕೆ ಯಾಕಿಲ್ಲ? ಸಚನೆ ಕೊಡದೆ ಮಾಡಿರುವ ಈ ನಿರ್ಬಂಧನೆಗಳಿಂದ ಚಿತ್ರರಂಗ ಬಲಿ' ಎಂದಿದ್ದಾರೆ ನಟ ಯಶ್.
ಯಶ್ ಮಾಡಿರುವ ಈ ಟ್ವೀಟ್ ಅನ್ನು ಪುನೀತ್ ರಾಜ್ಕುಮಾರ್, 'ಯುವರತ್ನ' ನಿರ್ದೇಶಕ ಸಂತೋಶ್ ಆನಂದ್ರಾಮ್, ಹೊಂಬಾಳೆ ಫಿಲಮ್ಸ್ ಜೊತೆಗೆ ಸಿಎಂ ಯಡಿಯೂರಪ್ಪ ಅವರಿಗೂ ಟ್ಯಾಗ್ ಮಾಡಿದ್ದಾರೆ ಯಶ್.
ಯಶ್ ಅವರ 'ಕೆಜಿಎಫ್ 2' ಸಹ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆ ಆಗಲಿದೆ. 'ಯುವರತ್ನ' ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಮ್ಸ್ ಅವರೇ ಆ ಸಿನಿಮಾವನ್ನೂ ನಿರ್ಮಾಣ ಮಾಡಿದ್ದಾರೆ. ಜೊತೆಗೆ ಪುನೀತ್ ಹಾಗೂ ಯಶ್ ಅವರು ಆಪ್ತ ಗೆಳೆಯರೂ ಸಹ ಹಾಗಾಗಿ ಸಂಕಷ್ಟಕ್ಕೆ ಸಿಲುಕಿರುವ ಪುನೀತ್ ಅವರ ಸಿನಿಮಾದ ನೆರವಿಗೆ ಬಂದಿದ್ದಾರೆ ನಟ ಯಶ್.
Recommended Video
ಈಗಾಗಲೇ ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ಸ್ವತಃ ಪುನೀತ್ ರಾಜ್ಕುಮಾರ್, ಶಿವರಾಜ್ ಕುಮಾರ್, ಸುದೀಪ್ ಹಲವಾರು ನಿರ್ಮಾಪಕರು ಸರ್ಕಾರದ ದಿಢೀರ್ ಕ್ರಮವನ್ನು ಪ್ರಶ್ನಿಸಿದ್ದಾರೆ.