Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಪರಾಧ ಮುಕ್ತ ಸಮಾಜಕ್ಕಾಗಿ ಪಣತೊಟ್ಟ ರಾಕಿಂಗ್ ಸ್ಟಾರ್
ನಾವು ಜೀವನ ಮಾಡುವ ಕಡೆಯಲ್ಲಿ ಉತ್ತಮ ಪರಿಸರ ಸೃಷ್ಟಿ ಮಾಡಿಕೊಳ್ಳಬೇಕು ಎಂದು ಸಂದೇಶ ಸಾರಿದ ಯಶ್ ಈಗ ಅಪರಾಧ ಮುಕ್ತ ಸಮಾಜವನ್ನ ಮಾಡಲು ನಿರ್ಧರಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರನ್ನ ಸಿಸಿಬಿ ಯ ರಾಯಭಾರಿ ಆಗಿ ಆಯ್ಕೆ ಮಾಡಲಾಗಿದೆ.
ಪ್ರೋ ಕಬ್ಬಡಿ ಜಾಹೀರಾತನ್ನು ಹೊರತು ಪಡಿಸಿ ಈವರೆಗೆ ಯಾವುದೇ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳದ ರಾಕಿಂಗ್ ಸ್ಟಾರ್, ಇದೇ ಮೊದಲ ಭಾರಿಗೆ ಪೊಲೀಸ್ ಇಲಾಖೆಯ ರಾಯಭಾರಿ ಆಗುವ ಮೂಲಕ ಮೊಟ್ಟ ಮೊದಲ ಜಾಹೀರಾತಿನಲ್ಲಿ ಅಭಿನಯಿಸಲಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್
ಈ ಹಿಂದೆ ಕಿಚ್ಚ ಸುದೀಪ್ ಸಿಸಿಬಿ ಯ ರಾಯಭಾರಿ ಆಗಿದ್ದರು. ಕಿಚ್ಚನ ನಂತರ ರಾಕಿಂಗ್ ಸ್ಟಾರ್ ಅಪರಾಧಿಗಳಿಗೆ ಮಾತಿನಲ್ಲೇ ಬುದ್ದಿ ಹೇಳಲಿದ್ದಾರೆ. ಸರ್ಕಾರಿಯ ಸಾಕಷ್ಟು ಜಾಹೀರಾತುಗಳಲ್ಲಿ ಸಿನಿಮಾ ಹಾಗೂ ಕ್ರೀಡಾಲೋಕದ ಗಣ್ಯರು ಭಾಗಿ ಆಗಿದ್ದಾರೆ.
ಯುವ ಮನಸ್ಸುಗಳನ್ನು ಸೆಳೆಯಲು "ಬ್ರಾಂಡ್ ಅಂಬಾಸಿಡರ್' ಬಳಕೆಗೆ ಮುಂದಾಗಿರುವ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ, ರೌಡಿ ಚಟುವಟಕೆಗಳು ಹಾಗೂ ಕಳ್ಳತನ ಸೇರಿದಂತೆ ಅಪರಾಧ ಚಟುವಟಿಕೆಗಳಿಂದ ಮುಕ್ತರಾಗುವಂತೆ ಸಂದೇಶ ಸಾರುವ ಜಾಹೀರಾತುಗಳಲ್ಲಿ ಯಶ್ ಅಭಿನಯಿಸಲಿದ್ದಾರಂತೆ.
ಗೂಗ್ಲಿ ಸಿನಿಮಾದಲ್ಲಿ ಖಾಕಿ ತೊಟ್ಟು ಪೋಸ್ ಕೊಟ್ಟಿದ್ದ ರಾಕಿಂಗ್ ಸ್ಟಾರ್ ಈ ಬಾರಿ ಅಪರಾಧಿಗಳಿಗೆ ಪಾಠ ಹೇಳಲು ನಿರ್ಧರಿಸಿದ್ದಾರೆ. ಸಾಕಷ್ಟು ವಿಚಾರಗಳಲ್ಲಿ ಅನೇಕರಿಗೆ ಮಾದರಿ ಆಗಿರುವ ಯಶ್ ಮತ್ತೊಂದು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಖುಷಿಯ ವಿಚಾರ.
ಡಿ ಬಾಸ್ ಮನವಿಯನ್ನ ಅಭಿಮಾನಿಗಳು ಪರಿಗಣಿಸಬೇಕಾಗಿದೆ