Don't Miss!
- Finance ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ, 144 ಸೆಕ್ಷನ್ ಜಾರಿ, ದಿನಾಂಕ ವಿವರ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪರಾಧ ಮುಕ್ತ ಸಮಾಜಕ್ಕಾಗಿ ಪಣತೊಟ್ಟ ರಾಕಿಂಗ್ ಸ್ಟಾರ್
ನಾವು ಜೀವನ ಮಾಡುವ ಕಡೆಯಲ್ಲಿ ಉತ್ತಮ ಪರಿಸರ ಸೃಷ್ಟಿ ಮಾಡಿಕೊಳ್ಳಬೇಕು ಎಂದು ಸಂದೇಶ ಸಾರಿದ ಯಶ್ ಈಗ ಅಪರಾಧ ಮುಕ್ತ ಸಮಾಜವನ್ನ ಮಾಡಲು ನಿರ್ಧರಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರನ್ನ ಸಿಸಿಬಿ ಯ ರಾಯಭಾರಿ ಆಗಿ ಆಯ್ಕೆ ಮಾಡಲಾಗಿದೆ.
ಪ್ರೋ ಕಬ್ಬಡಿ ಜಾಹೀರಾತನ್ನು ಹೊರತು ಪಡಿಸಿ ಈವರೆಗೆ ಯಾವುದೇ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳದ ರಾಕಿಂಗ್ ಸ್ಟಾರ್, ಇದೇ ಮೊದಲ ಭಾರಿಗೆ ಪೊಲೀಸ್ ಇಲಾಖೆಯ ರಾಯಭಾರಿ ಆಗುವ ಮೂಲಕ ಮೊಟ್ಟ ಮೊದಲ ಜಾಹೀರಾತಿನಲ್ಲಿ ಅಭಿನಯಿಸಲಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್
ಈ ಹಿಂದೆ ಕಿಚ್ಚ ಸುದೀಪ್ ಸಿಸಿಬಿ ಯ ರಾಯಭಾರಿ ಆಗಿದ್ದರು. ಕಿಚ್ಚನ ನಂತರ ರಾಕಿಂಗ್ ಸ್ಟಾರ್ ಅಪರಾಧಿಗಳಿಗೆ ಮಾತಿನಲ್ಲೇ ಬುದ್ದಿ ಹೇಳಲಿದ್ದಾರೆ. ಸರ್ಕಾರಿಯ ಸಾಕಷ್ಟು ಜಾಹೀರಾತುಗಳಲ್ಲಿ ಸಿನಿಮಾ ಹಾಗೂ ಕ್ರೀಡಾಲೋಕದ ಗಣ್ಯರು ಭಾಗಿ ಆಗಿದ್ದಾರೆ.
ಯುವ ಮನಸ್ಸುಗಳನ್ನು ಸೆಳೆಯಲು "ಬ್ರಾಂಡ್ ಅಂಬಾಸಿಡರ್' ಬಳಕೆಗೆ ಮುಂದಾಗಿರುವ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ, ರೌಡಿ ಚಟುವಟಕೆಗಳು ಹಾಗೂ ಕಳ್ಳತನ ಸೇರಿದಂತೆ ಅಪರಾಧ ಚಟುವಟಿಕೆಗಳಿಂದ ಮುಕ್ತರಾಗುವಂತೆ ಸಂದೇಶ ಸಾರುವ ಜಾಹೀರಾತುಗಳಲ್ಲಿ ಯಶ್ ಅಭಿನಯಿಸಲಿದ್ದಾರಂತೆ.
ಗೂಗ್ಲಿ ಸಿನಿಮಾದಲ್ಲಿ ಖಾಕಿ ತೊಟ್ಟು ಪೋಸ್ ಕೊಟ್ಟಿದ್ದ ರಾಕಿಂಗ್ ಸ್ಟಾರ್ ಈ ಬಾರಿ ಅಪರಾಧಿಗಳಿಗೆ ಪಾಠ ಹೇಳಲು ನಿರ್ಧರಿಸಿದ್ದಾರೆ. ಸಾಕಷ್ಟು ವಿಚಾರಗಳಲ್ಲಿ ಅನೇಕರಿಗೆ ಮಾದರಿ ಆಗಿರುವ ಯಶ್ ಮತ್ತೊಂದು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಖುಷಿಯ ವಿಚಾರ.
ಡಿ ಬಾಸ್ ಮನವಿಯನ್ನ ಅಭಿಮಾನಿಗಳು ಪರಿಗಣಿಸಬೇಕಾಗಿದೆ