Don't Miss!
- News ಡಿ ಕೆ ಶಿವಕುಮಾರ್ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು
- Finance Lok Sabha Election 2024: ಡಿಜಿಲಾಕರ್ಗಾಗಿ ಡಿಜಿಟಲ್ ವೋಟರ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪರಾಧ ಮುಕ್ತ ಸಮಾಜಕ್ಕಾಗಿ ಪಣತೊಟ್ಟ ರಾಕಿಂಗ್ ಸ್ಟಾರ್
ನಾವು ಜೀವನ ಮಾಡುವ ಕಡೆಯಲ್ಲಿ ಉತ್ತಮ ಪರಿಸರ ಸೃಷ್ಟಿ ಮಾಡಿಕೊಳ್ಳಬೇಕು ಎಂದು ಸಂದೇಶ ಸಾರಿದ ಯಶ್ ಈಗ ಅಪರಾಧ ಮುಕ್ತ ಸಮಾಜವನ್ನ ಮಾಡಲು ನಿರ್ಧರಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರನ್ನ ಸಿಸಿಬಿ ಯ ರಾಯಭಾರಿ ಆಗಿ ಆಯ್ಕೆ ಮಾಡಲಾಗಿದೆ.
ಪ್ರೋ ಕಬ್ಬಡಿ ಜಾಹೀರಾತನ್ನು ಹೊರತು ಪಡಿಸಿ ಈವರೆಗೆ ಯಾವುದೇ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳದ ರಾಕಿಂಗ್ ಸ್ಟಾರ್, ಇದೇ ಮೊದಲ ಭಾರಿಗೆ ಪೊಲೀಸ್ ಇಲಾಖೆಯ ರಾಯಭಾರಿ ಆಗುವ ಮೂಲಕ ಮೊಟ್ಟ ಮೊದಲ ಜಾಹೀರಾತಿನಲ್ಲಿ ಅಭಿನಯಿಸಲಿದ್ದಾರೆ.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್
ಈ ಹಿಂದೆ ಕಿಚ್ಚ ಸುದೀಪ್ ಸಿಸಿಬಿ ಯ ರಾಯಭಾರಿ ಆಗಿದ್ದರು. ಕಿಚ್ಚನ ನಂತರ ರಾಕಿಂಗ್ ಸ್ಟಾರ್ ಅಪರಾಧಿಗಳಿಗೆ ಮಾತಿನಲ್ಲೇ ಬುದ್ದಿ ಹೇಳಲಿದ್ದಾರೆ. ಸರ್ಕಾರಿಯ ಸಾಕಷ್ಟು ಜಾಹೀರಾತುಗಳಲ್ಲಿ ಸಿನಿಮಾ ಹಾಗೂ ಕ್ರೀಡಾಲೋಕದ ಗಣ್ಯರು ಭಾಗಿ ಆಗಿದ್ದಾರೆ.
ಯುವ ಮನಸ್ಸುಗಳನ್ನು ಸೆಳೆಯಲು "ಬ್ರಾಂಡ್ ಅಂಬಾಸಿಡರ್' ಬಳಕೆಗೆ ಮುಂದಾಗಿರುವ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ, ರೌಡಿ ಚಟುವಟಕೆಗಳು ಹಾಗೂ ಕಳ್ಳತನ ಸೇರಿದಂತೆ ಅಪರಾಧ ಚಟುವಟಿಕೆಗಳಿಂದ ಮುಕ್ತರಾಗುವಂತೆ ಸಂದೇಶ ಸಾರುವ ಜಾಹೀರಾತುಗಳಲ್ಲಿ ಯಶ್ ಅಭಿನಯಿಸಲಿದ್ದಾರಂತೆ.
ಗೂಗ್ಲಿ ಸಿನಿಮಾದಲ್ಲಿ ಖಾಕಿ ತೊಟ್ಟು ಪೋಸ್ ಕೊಟ್ಟಿದ್ದ ರಾಕಿಂಗ್ ಸ್ಟಾರ್ ಈ ಬಾರಿ ಅಪರಾಧಿಗಳಿಗೆ ಪಾಠ ಹೇಳಲು ನಿರ್ಧರಿಸಿದ್ದಾರೆ. ಸಾಕಷ್ಟು ವಿಚಾರಗಳಲ್ಲಿ ಅನೇಕರಿಗೆ ಮಾದರಿ ಆಗಿರುವ ಯಶ್ ಮತ್ತೊಂದು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಖುಷಿಯ ವಿಚಾರ.
ಡಿ ಬಾಸ್ ಮನವಿಯನ್ನ ಅಭಿಮಾನಿಗಳು ಪರಿಗಣಿಸಬೇಕಾಗಿದೆ