Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಲಾವಿದೆಯ ಕೈಯಲ್ಲಿ ಅರಳಿದ 'ರಾಕಿ ಭಾಯ್' ಯಶ್
ಕರ್ನಾಟಕದಲ್ಲಿ ಕೆಜಿಎಫ್ ಕ್ರೇಜ್ ಜೋರಾಗಿದೆ. ಸಿನಿಮಾ ರಿಲೀಸ್ ಆದ್ಮೇಲಂತೂ ಯಶ್ ಗೆ ಫಿದಾ ಆದವರು ಅದೇಷ್ಟೋ ಜನ. ಕೆಜಿಎಫ್ ನೋಡ್ಕೊಂಡು ಬಂದು ರಾಕಿ ಭಾಯ್ ಮೇಲೆ ಲವ್ವಾಗಿದೆ ಅಂತ ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಸ್ಟೇಟಸ್ ಹಾಕಿರುವ ಅಭಿಮಾನಿಗಳು ಹೆಚ್ಚಾಗಿದ್ದಾರೆ.
ಆದ್ರೆ, ಇಲ್ಲೊಬ್ಬ ಕಲಾವಿದೆ ವಿಶೇಷವಾಗಿ ಗಮನ ಸೆಳೆದಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ಭಾವಚಿತ್ರವನ್ನ ತಮ್ಮ ಕಲೆಯಲ್ಲಿ ಅರಳಿಸಿದ್ದಾರೆ.
ಸಾಮಾನ್ಯವಾಗಿ ಸ್ಕೆಚ್, ಪೆನ್ಸಿಲ್ ಡ್ರಾಯಿಂಗ್, ಪೋಸ್ಟರ್ ಡಿಸೈನ್ ನೋಡಬಹುದು. ಆದ್ರೆ, ಈ ಕಲಾವಿದೆ ನೆಲದ ಮೇಲೆ ಬಣ್ಣಗಳನ್ನ ಬಳಸಿ, 'ರಾಕಿ ಭಾಯ್'ಗೆ ಜೀವ ನೀಡಿದ್ದಾರೆ.
ವಿಮರ್ಶೆ-2: 'ಕೆಜಿಎಫ್' ಇಷ್ಟವಾಗೋದು ಈ ಎರಡೇ ಕಾರಣಕ್ಕೆ.!
ಬಟ್, ಈ ಚಿತ್ರವನ್ನ ಎಲ್ಲಿ ಬಿಡಿಸಿದ್ದರು, ಯಾವಾಗ ಬಿಡಿಸಿದ್ದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದ್ರೆ, ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದ್ದು, ಜನರಿಂದ ಮೆಚ್ಚುಗೆ ಗಳಿಸಿಕೊಂಡಿದೆ.
ಅಂದ್ಹಾಗೆ, ಯಶ್ ಅವರ ಈ ಚಿತ್ತಾರವನ್ನ ಬಿಡಿಸಿದ ಕಲಾವಿದೆಯ ಹೆಸರು ಮಹೇಶ್ವರಿ. ಬೀದರ್ ಮೂಲದವರು ಎಂದು ತಿಳಿದಿದೆ.
ಕೆಜಿಎಫ್ 'ಕನ್ನಡದ ಗೋಲ್ಡನ್ ಫಿಲಂ' ಎನ್ನುತ್ತಿದ್ದಾರೆ ಪ್ರೇಕ್ಷಕ ಪ್ರಭುಗಳು.!
ಇನ್ನು ಕೆಜಿಎಫ್ ಸಿನಿಮಾ ಐದು ಭಾಷೆಯಲ್ಲಿ ತೆರೆಕಂಡಿದ್ದು, ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾ ಐದು ಭಾಷೆಯಲ್ಲಿ ರಿಲೀಸ್ ಆಗಿತ್ತು. ಯಶ್, ಶ್ರೀನಿಧಿ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.