Don't Miss!
- News Gold Price: ಗಗನ ಕುಸುಮವಾದ ಬಂಗಾರ: ಮಾರ್ಚ್ 28ರ ಚಿನ್ನ ಮತ್ತು ಬೆಳ್ಳಿ ದರ ವಿವರ
- Sports SRH vs MI: ಇತಿಹಾಸದ ಪುಟ ಸೇರಿದ ಪಂದ್ಯ; ಈ ಪಂದ್ಯದಲ್ಲಿ ದಾಖಲಾದ ರೆಕಾರ್ಡ್ ಪಟ್ಟಿ ಇಲ್ಲಿದೆ
- Finance 7th pay Commission: ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ, ಒಂದು ದಿನ ಮುಂಚಿತವಾಗಿ ಸಂಬಳ
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಯಾಂಗನೆ ಸುಮಲತಾ' ಟೀಕೆಗೆ ರಾಕಿಂಗ್ ಸ್ಟಾರ್ ಫುಲ್ ಗರಂ
Recommended Video
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಗಿಂತ ಮಾಯಾಂಗನೆ ಎಂದು ಸಂಸದ ಶಿವರಾಮೇಗೌಡ ಟೀಕೆ ಮಾಡಿದ್ದರು. ಈ ಹೇಳಿಕೆಗೆ ಸುಮಲತಾ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.
ನಟ ದರ್ಶನ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ 'ಅವರು ಏನೇ ಹೇಳಿದ್ರು ನಾವು ರಿಯಾಕ್ಟ್ ಮಾಡಲ್ಲ' ಎಂದಿದ್ದರು. ಇದೀಗ, ಈ ಬಗ್ಗೆ ನಟ ಯಶ್ ಮಾತನಾಡಿ ಸಂಸದ ಶಿವರಾಮೇಗೌಡ ವಿರುದ್ಧ ಕಿಡಿಕಾರಿದ್ದಾರೆ.
'ಅಂಬರೀಶ್ ಅವರು ಇದ್ದಿದ್ರೆ ಬರಿ ಬೆರಳು ತೋರಿಸಲು ಯಾರಿಗಾದರೂ ತಾಕತ್ ಇತ್ತಾ? ಅವರಿಲ್ಲ ಎಂಬ ಕಾರಣಕ್ಕೆ ಈಗ ಏನೆಲ್ಲಾ ಮಾತಾಡ್ತಿದ್ದಾರೆ. ಈ ದುರಹಂಕಾರಕ್ಕೆ ಮಂಡ್ಯ ಜನರು ಪಾಠ ಕಲಿಸುತ್ತಾರೆ' ಎಂದು ಯಶ್ ತಿರುಗೇಟು ನೀಡಿದ್ದಾರೆ.
'ಮಾಯಾಂಗನೆ ಸುಮಲತಾ' ಟೀಕೆಗೆ ದರ್ಶನ್ ಹೇಳಿದ್ದು ಮತ್ತದೇ ಉತ್ತರ
'ಹೆಣ್ಣುಮಕ್ಕಳ ವಿಚಾರಕ್ಕೆ ಬರಬಾರದು. ಅವರ ಮನೆಯಲ್ಲೂ ಹೆಣ್ಣು ಮಕ್ಕಳು ಇರ್ತಾರೆ. ಇವರ ಬಗ್ಗೆ ಮಾತನಾಡುವುದಕ್ಕೂ ಮುಂಚೆ ಅವರ ಹೆಣ್ಣು ಮಕ್ಕಳನ್ನ ನೆನಪು ಮಾಡಿಕೊಳ್ಳಲಿ. ಅವರ ಗಂಡ ಸ್ಪರ್ಧೆ ಮಾಡಿದ್ದ ಜಾಗದಲ್ಲಿ ಅವರು ಚುನಾವಣೆ ಸ್ಪರ್ಧಿಸಿದ್ದಾರೆ. ಅದರಲ್ಲಿ ಏನಿದು ತಪ್ಪು' ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ ಪ್ರಚಾರದ ವೇಳೆ ಡೈಲಾಗ್ ಅರ್ಧಕ್ಕೆ ನಿಲ್ಲಿಸಿದ ದರ್ಶನ್, ಕಾರಣವೇನು?
ಇಂದು ನಾಗಮಂಗಲದಲ್ಲಿ ಪ್ರಚಾರ ಮಾಡುತ್ತಿರುವ ಯಶ್, ಏಪ್ರಿಲ್ 14 ರಂದು ಕೆ ಆರ್ ಪೇಟೆ, ಏಪ್ರಿಲ್ 15 ರಂದು ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.